ರಾಮನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಾಡಿಗೆ ದರಿದ್ರ ಮತ್ತು ಬರ ಬರುತ್ತದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.  


COMMERCIAL BREAK
SCROLL TO CONTINUE READING

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹಾರೋಕೊಪ್ಪ ಗ್ರಾಮದಲ್ಲಿ ಮಾತನಾಡಿರುವ ಎಚ್‍ಡಿಕೆ, ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಾಡಿಗೆ ದರಿದ್ರ ಮತ್ತು ಬರ ಬರುತ್ತದೆ ಎಂಬ ಪ್ರತೀತಿ ಇದೆ, ಹೀಗಾಗಿ ಈ ವರ್ಷ ಹಾಗೆ ಆಗಿದ್ದು, ರಾಜ್ಯದಲ್ಲಿ ಬರಗಾಲ ಶುರುವಾಗಿದೆ’ ಅಂತಾ ಹೇಳಿದ್ದಾರೆ.


ಇದನ್ನೂ ಓದಿ: ಮಹಾಘಟಬಂಧನ ಮೀಟಿಂಗ್‌: ಬೆಂಗಳೂರಿನಲ್ಲಿ ಕುಮಾರಸ್ವಾಮಿ ಆಕ್ರೋಶ


ಬಿಜೆಪಿ ಸೇರಿದಂತೆ ಯಾರ ಬಗ್ಗೆಯೂ ನನಗೆ ಮೃದು ಧೋರಣೆ ಇಲ್ಲ, ಅದನ್ನು ಇಟ್ಟುಕೊಂಡು ನಾನು ಏನು ಮಾಡಲಿ? ವರ್ಗಾವಣೆಗೆ ನಾನು ಲಂಚ ಪಡೆದಿರುವುದು ಸಾಬೀತಾದ್ರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆಂದು ಇದೇ ವೇಳೆ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.


ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೇವಲ 2 ತಿಂಗಳಲ್ಲೇ ವರ್ಗಾವಣೆ ದಂಧೆಯಲ್ಲಿ 500 ಕೋಟಿ ರೂ. ವಹಿವಾಟು ನಡೆದಿದೆ. ಪ್ರತಿಯೊಂದು ಇಲಾಖೆಯಲ್ಲಿಯೂ ವರ್ಗವಣೆ ದಂಧೆ ನಡೆಯುತ್ತಿದೆ. ಅಧಿಕಾರಿಯೊಬ್ಬರು ನನಗೆ ಈ ಮಾಹಿತಿ ನೀಡಿದ್ದಾರೆ ಅಂತಾ ಎಚ್‍ಡಿಕೆ ಗಂಭೀರ ಆರೋಪ ಮಾಡಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರಕ್ಕೆ ಚೆಲ್ಲಾಟ, ರೈತರಿಗೆ ಮರಣ ಸಂಕಟ: ಮಾಜಿ ಸಿಎಂ ಹೆಚ್‌ಡಿಕೆ


ಸದನದಲ್ಲಿ ವರ್ಗಾವಣೆಗೆ ಲಂಚ ಪಡೆದಿರುವ ದಾಖಲೆಯನ್ನು ಬಿಡುಗಡೆ ಮಾಡಿದ್ರೆ, ನನ್ನ ಅಧಿಕಾರಾವಧಿಯಲ್ಲಿ ಕೋಟಿ ಕೋಟಿ ಹಣ ಪಡೆದಿದ್ದಾರೆಂದು ದಾಖಲೆ ಬಿಡುಗಡೆ ಮಾಡುತ್ತೀರಾ? ನನ್ನ ಕಾಲದಲ್ಲಿ ನಾನು ಲಂಚ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.