ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಕಲೆಕ್ಷನ್: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿದ್ದಾರೆ.  

Written by - Prashobh Devanahalli | Last Updated : Jan 26, 2024, 06:53 PM IST
  • ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ಟೀಕಿಸಿದ ಮಾಜಿ ಸಿಎಂ
  • ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಕಲೆಕ್ಷನ್
  • ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಕಲೆಕ್ಷನ್: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ title=

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ʻಬೆಂಗಳೂರು ನಗದಾಭಿವೃದ್ಧಿʼ ಇಲಾಖೆ ಎಂದು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕೈಗಾರಿಕೆ ಇಲಾಖೆಯಲ್ಲಿ ಬಿಡಿಎಗೆ ಏನು ಕೆಲಸ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವ್ರತ ಮಾಡುವ ಮೋದಿಗಿಂತ ಅಭಿವೃದ್ಧಿ ಮಾಡುವ ಸಿದ್ದು ಲೇಸು: ಪ್ರೊ.ಬಿ.ಪಿ.ಮಹೇಶ್ಚಂದ್ರ ಗುರು 

'ಬೆಂಗಳೂರು ನಗದಾಭಿವೃದ್ಧಿ' ಇಲಾಖೆಯು ನಗದು ಅಭಿವೃದ್ಧಿಗೆ ಸಿಕ್ಕಸಿಕ್ಕ ಕಡೆ ಸುಲಿಗೆಗೆ ಇಳಿದಿದೆ. ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಕೈಗಾರಿಕೆ, ಉದ್ಯಮ ಚಟುವಟಿಕೆಗೆ ಒಪ್ಪಿಗೆ ಕೊಡಲು KIADB ಇದೆ. ಏಕಗವಾಕ್ಷಿ ವ್ಯವಸ್ಥೆ ಅಡಿಯಲ್ಲಿ ಪ್ರಕ್ರಿಯೆ ನಿರಾತಂಕವಾಗಿ ನಡೆಯುತ್ತಿದೆ. ಅದಕ್ಕೂ ಮುನ್ನ ಉನ್ನತಮಟ್ಟದ ಹೂಡಿಕೆ ಅನುಮೋದನೆ ಸಮಿತಿ ಒಪ್ಪಿಗೆಯನ್ನೂ ಕೊಡುತ್ತದೆ. ಇಷ್ಟೆಲ್ಲ ಇದ್ದ ಮೇಲೆ ಇಲ್ಲಿ BDA ಕೆಲಸ ಏನು? ಯಾರ ಕಿಸೆ ಭರ್ತಿ ಮಾಡಲಿಕ್ಕೆ BDA ಇಂಥ ಅಡ್ಡದಾರಿ ತುಳಿದಿದೆ? ಎಂದು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವರ್ತನೆಯನ್ನು ಕಟುವಾಗಿ ಟೀಕಿಸಿದ್ದಾರೆ.

ಬೆಂಗಳೂರು ವ್ಯಾಪ್ತಿಯಲ್ಲಿ ತನ್ನ ಅನುಮೋದನೆ ಇಲ್ಲದೆ ಉದ್ಯಮ ಪಾರ್ಕ್ ರಚನೆ, ಅಭಿವೃದ್ಧಿ, ಕೈಗಾರಿಕಾ ಸಮುಚ್ಚಯಗಳ ನಿರ್ಮಾಣ ಮಾಡಬಾರದು ಎಂದು BDA ಫರ್ಮಾನು ಹೊರಡಿಸಿರುವುದು ಬೆಂಗಳೂರು 'ನಗದಾಭಿವೃದ್ಧಿ' ಇಲಾಖೆ ಕೈಚಳಕ, ಅನುಮಾನವೇ ಇಲ್ಲ. ತೆಲಂಗಾಣ ಎಲೆಕ್ಷನ್ ಗೆ ಕಲೆಕ್ಷನ್ ಮಾಡಿದಂತೆ ಈಗ ಲೋಕಸಭೆ ಚುನಾವಣೆಗೆ ವಸೂಲಿ ಶುರುವಾಗಿದೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಧಾರ್ಮಿಕ ರಾಷ್ಟ್ರೀಯತೆಯ ಮೂಲಕ ದೇಶ ಕಟ್ಟಲು ಸಾಧ್ಯವಿಲ್ಲ- ಸಿಎಂ ಸಿದ್ದರಾಮಯ್ಯ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News