ಬೆಂಗಳೂರು: ಕೆಆರ್‌ಎಸ್‌ ಮತ್ತು ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಮತ್ತು ಜೆಡಿಎಸ್ ಮುಖಂಡರ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ಮುಂದುವರೆಸಿದ್ದಾರೆ.


COMMERCIAL BREAK
SCROLL TO CONTINUE READING

ಟ್ವಿಟ್ ಮೂಲಕ ದಳಪತಿಗಳಿಗೆ ತಿವಿದಿರುವ ಸುಮಲತಾ(Sumalatha Ambareesh), ‘ಬೇರೆಯವರಿಗೆ ಗಂಧವನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ. ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ’ ಎಂದು ಪರೋಕ್ಷವಾಗಿ ಎಚ್‌ಡಿಕೆ ಮತ್ತು ಜೆಡಿಎಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. 


DK Shivakumar : 'ಹೆಣದಲ್ಲೂ ಹಣ ಲೂಟಿ ಹೊಡೆಯುವ ಸರ್ಕಾರವಿದು'


ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಪ್ರಸ್ತಾಪಿಸಿರುವ ಅವರು, ‘ಕೆಲವೇ ಜನರ ದುರಾಸೆಗೆ, ಸ್ವಾರ್ಥಕ್ಕೆ ನಮ್ಮ ಜನರ, ಮಕ್ಕಳ ಭವಿಷ್ಯ ಬಲಿಯಾಗಲು ಬಿಡಬಾರದು’ ಎಂದಿದ್ದಾರೆ. ಇದಲ್ಲದೆ ‘ಅಕ್ರಮ ಗಣಿಗಾರಿಕೆ(Illegal Mining)ಯ ಬಗ್ಗೆ ಜನಪ್ರತಿನಿಧಿಯಾದ ನಾನು ಮಾತನಾಡಿದರೆ, ಅದಕ್ಕೆ ಬೇರೆ ಬೇರೆ ಅರ್ಥ ಹುಟ್ಟಿಸುವುದು ತಪ್ಪು. ಸತ್ಯ ಎಲ್ಲಿದ್ದರೂ ಪ್ರಕಾಶಿಸುತ್ತದೆ. ಅಕ್ರಮ ಗಣಿಗಾರಿಕೆ ವಿರೋಧಿ ಧ್ವನಿಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ’ ಎಂದು ಕುಟುಕಿದ್ದಾರೆ. 


‘ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ’ ಎನ್ನುವ ಮೂಲಕ ವೈಯಕ್ತಿಕ ದಾಳಿ ಮಾಡುತ್ತಿದ್ದ ಜೆಡಿಎಸ್ ನಾಯಕರ(JDS Leaders) ವಿರುದ್ಧ ಸುಮಲತಾ ಕಿಡಿಕಾರಿದ್ದಾರೆ.


Laxman Savadi : 'ವಾಹನ ಮಾಲೀಕ'ರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..! 


ಕೆಆರ್‌ಎಸ್‌ ಮತ್ತು ಗಣಿಗಾರಿಕೆ ವಿಚಾರವಾಗಿ ಶುರುವಾದ ಮಂಡ್ಯದ ರಾಜಕೀಯ ಸಮರ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಸದ್ಯ ಎಚ್‌ಡಿಕೆ(HDK) ಈ ರಾಜಕೀಯ ಸಮರದಿಂದ ಹಿಂದೆ ಸರಿದ್ದಾರೆ. ಆದರೆ ತಮ್ಮ ವಿರುದ್ಧ ವೈಯಕ್ತಿಕ ದಾಳಿ ಮಾಡಿರುವ ಜೆಡಿಎಸ್ ನಾಯಕರ ವಿರುದ್ಧ ಸುಮಲತಾ ಅಂಬರೀಶ್(Sumalatha Ambareesh) ಆಕ್ರೋಶ ಮುಂದುವರೆದಿದೆ.    


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ