Shakti Yojane: ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿಯಾದ ಬಳಿಕ ದಾವಣಗೆರೆಯಲ್ಲಿನ ಖಾಸಗಿ ಬಸ್ ಗಳು ಖಾಲಿ ಖಾಲಿಯಾಗಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಖಾಸಗಿ ಬಸ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಮಹಿಳೆಯರು ಕೆ‌ಎಸ್‌ಆರ್‌ಟಿ‌ಸಿ ಬಸ್ ಗಳತ್ತ ಹೆಚ್ಚಾಗಿ ಮುಖ ಮಾಡುತ್ತಿದ್ದು, ಅವರೊಂದಿಗೆ ಪುರಷರು ಕೂಡ ಹೋಗುತ್ತಿದ್ದಾರೆ. ಹೀಗಾಗಿ, ಖಾಸಗಿ ಬಸ್ ಗಳ ಮೇಲೆ ಭಾರಿ ಹೊಡೆತ ಬಿದ್ದಂತಾಗಿದೆ. ಇನ್ನು, ದಾವಣಗೆರೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಂಖ್ಯೆ ಕೂಡ ತೀರಾ ಕಡಿಮೆಯಾಗಿದೆ. 


ಇದನ್ನೂ ಓದಿ- ನಾರಿಯರೇ  ಬಸ್‌ನಲ್ಲಿ ಫ್ರೀಯಾಗಿ ಪ್ರಯಾಣಿಸಿ..! ಉಚಿತ ಖಚಿತವಾಗಿದೆ.. 


ನಿತ್ಯ ಮಹಿಳೆಯರಿಂದ ತುಂಬಿರುತ್ತಿದ್ದ ಖಾಸಗಿ ಬಸ್ ನಿಲ್ದಾಣದಲ್ಲಿ ಇಂದು ಮಹಿಳಾ ಪ್ರಯಾಣಿಕರ ಸಂಖ್ಯೆ ತೀರಾ ವಿರಳವಾಗಿತ್ತು. ಅಲ್ಲದೇ ಬಸ್ ಗಳಲ್ಲಿ ಪುರುಷ ಪ್ರಯಾಣಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಕಂಡು ಬಂದಿದೆ. ಮತ್ತೊಂದು ಕಡೆ ಮಹಿಳೆಯರಿಗೆ ಉಚಿತ ಪ್ರಯಾಣದಿಂದ ಖಾಸಗಿ ಬಸ್ ಮಾಲೀಕರ  ಮೇಲೆ ಸಾಕಷ್ಟು ಪರಿಣಾಮ ಬೀರಿದೆ. 


ದಾವಣಗೆರೆಯಿಂದ ಚನ್ನಗಿರಿ, ಹೊನ್ನಾಳಿ, ಶಿವಮೊಗ್ಗ, ಚಿತ್ರದುರ್ಗ, ಚಳ್ಳಕೆರೆ, ಹರಪನಹಳ್ಳಿ ಸೇರಿದಂತೆ ನಾನಾ ಭಾಗಗಳಿಗೆ ಖಾಸಗಿ ಬಸ್ ಗಳು ಸಂಚರಿಸುತ್ತವೆ. ನಿತ್ಯ 8 ರಿಂದ 10 ಸಾವಿರ ರೂಪಾಯಿ ಕಲೆಕ್ಷನ್ ಆಗುವುದು ಇದೀಗ 3 ರಿಂದ 5 ಸಾವಿರಕ್ಕೆ ಬಂದು ನಿಂತಿದೆ. 


ಇದನ್ನೂ ಓದಿ- ಶಕ್ತಿ ಯೋಜನೆ: ಮೂಲ ದಾಖಲೆ ತೋರಿಸಿ ಉಚಿತ ಬಸ್ ಪ್ರಯಾಣ ಮಾಡಿ


ಪ್ರಯಾಣಿಕರನ್ನೇ ನಂಬಿದ್ದ ಖಾಸಗಿ ಬಸ್ ಮಾಲೀಕರು ಇದೀಗ ಸರ್ಕಾರದ ನಡೆಯ ವಿರುದ್ಧ ಆಕ್ರೋಶವನ್ನ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಹೊರೆ ತಪ್ಪಿಸಿಕೊಳ್ಳಲು ನಮಗೆ ಹಾಕಿರುವ ಟ್ಯಾಕ್ಸ್ ಗಳನ್ನ ಕಡಿಮೆ ಮಾಡುವಂತೆ ಆಗ್ರಹಿಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ