ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


COMMERCIAL BREAK
SCROLL TO CONTINUE READING

ಮಲೆನಾಡು ಭಾಗವಾದ ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಎನ್‌.ದಯಾನಂದ್‌ ತಿಳಿಸಿದ್ದಾರೆ.


ಜಿಲ್ಲ್ಯೆಯ ದಂಡಾವತಿ ನದಿ ಮೈದುಂಬಿ ಹರಿಯುತ್ತಿದ್ದರೆ, ತುಂಗಾ, ಶರಾವತಿ, ಮಾಲತಿ, ಕುಮದ್ವತಿ, ವರದಾ ನದಿಗಳು ಅಪಾಯಡ ಮಟ್ಟ ಮೀರಿ ಹರಿಯುತ್ತಿವೆ. ಭದ್ರಾ ಜಲಾಶಯದ ಒಳಹರಿವು 22 ಸಾವಿರ ಕ್ಯೂಸೆಕ್ ಗೆ ಏರಿಕೆಯಾಗಿದೆ.