ಬೆಂಗಳೂರು : Karnataka Rain Alert : ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಅಂದರೆ ಜೂನ್ ೭ರವರೆಗೆ ಭಾರೀ ಮಳೆಯಾಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ 7ನೇ ತಾರೀಕಿನವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ ಮಳೆಯೊಂದಿಗೆ ಭಾರೀ ಬಿರುಗಾಳಿಯ ಎಚ್ಚರಿಕೆ ಕೂಡಾ ನೀಡಲಾಗಿದೆ.  


COMMERCIAL BREAK
SCROLL TO CONTINUE READING

ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಅತಿಹೆಚ್ಚು ಮಳೆಯಾಗುವ  ಮುನ್ಸೂಚನೆ ನೀಡಲಾಗಿದೆ.ಇದರ ಜೊತೆಗೆ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಎಚ್ಚರಿಕೆಯನ್ನು ಕೂಡಾ ನೀಡಲಾಗಿದೆ. 


ಇದನ್ನೂ ಓದಿ :  ಬೆಂಗಳೂರಿನಲ್ಲಿ ಮಳೆ ಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್


ಇನ್ನು ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಬೆಂಗಳೂರು, ಶಿವಮೊಗ್ಗ,ಚಾಮರಾಜನಗರ,ಮಂಡ್ಯ,ಮೈಸೂರು ಸೇರಿ ಹಲವೆಡೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇದೇ ವೇಳೆ ಮಳೆ ಎಫೆಕ್ಟ್ ಗಳಿಂದ ಜಾಗೃತರಾಗಿರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 


ಇನ್ನು ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಧಾರಾಕಾರ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಬೆಸ್ಕಾಂ ಹೆಲ್ಪ್ ಲೈನ್ ಗೆ ದೂರುಗಳ ಸುರಿಮಳೆಯಾಗಿದೆ. ಹೆಲ್ಪ್ ಲೈನ್ ನಂಬರ್ 1912 ಗೆ  ಹೆಚ್ಚಿನ ಸಂಖ್ಯೆಯಲ್ಲಿ ದೂರು ಕೇಳಿ ಬಂದಿದೆ. ಧಾರಕಾರ ಮಳೆ ಹಿನ್ನಲೆಯಲ್ಲಿ  ನಿನ್ನೆ ತಡರಾತ್ರಿ ಬರೋಬ್ಬರಿ 8745 ದೂರುಗಳು ಬಂದಿವೆ. ವಿದ್ಯುತ್ ಕಡಿತ ಸೇರಿದಂತೆ ಹಲವು ದೂರುಗಳು ಬೆಸ್ಕಾಂ ಹೆಲ್ಪ್ ಲೈನ್ ಬಂದಿದೆ.


ಇದನ್ನೂ ಓದಿ :  ವಿಧಾನಸಭೆ ಚುನಾವಣೆ ಮಾದರಿಯಲ್ಲಿ ಈಗಲೂ ಎಕ್ಸಿಟ್ ಪೋಲ್ ಸುಳ್ಳಾಗಲಿವೆ: ಡಿಸಿಎಂ ಡಿ.ಕೆ.ಶಿವಕುಮಾರ್


ಬೆಸ್ಕಾಂ ವ್ಯಾಪ್ತಿಯಲ್ಲಿ 74 ವಿದ್ಯುತ್ ಕಂಬಗಳು ಧರಗುಳಿವೆ. 102 ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದಿವೆ. 9 ಟ್ರಾನ್ಸ್ ಫಾರ್ಮರ್ ಗಳಿಗೆ ಮಳೆಯಿಂದ ಹಾನಿಗೊಳಗಾಗಿವೆ.ನಿನ್ನೆ ತಡರಾತ್ರಿ ಸುರಿದ ಮಳೆಯಿಂದ ಬೆಸ್ಕಾಂಗೆ ಕೋಟ್ಯಾಂತರ ರೂ ನಷ್ಟವಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.