ಬೆಂಗಳೂರು : ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಬಂಗಾಳಕೊಲ್ಲಿ ಉಪಸಾಗರದಲ್ಲಿ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಲಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. 


COMMERCIAL BREAK
SCROLL TO CONTINUE READING

ಇಂದಿನಿಂದ ಜುಲೈ 29ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆ ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮತ್ತೆ ನಾಲ್ಕು ದಿನ ಮಳೆ ಸಂಕಷ್ಟ ಎದುರಾಗಲಿದೆ. 28 ರವರೆಗೆ ಕರಾವಳಿ ಜಿಲ್ಲೆಗಳಿಗೆ ಮತ್ತೆ ಭಾರೀ ಮಳೆ‌ ಎಚ್ಚರಿಕೆ ನೀಡಲಾಗಿದೆ. 


ಇದನ್ನೂ ಓದಿ : ಕಾವೇರಿ ನದಿಯಲ್ಲಿ ಎದುರಾದ ಪ್ರವಾಹ ಆತಂಕ :ನದಿ ಪಾತ್ರದ ಜನರಿಗೆ ರವಾನೆಯಾಯಿತು ಎಚ್ಚರಿಕೆಯ ಸಂದೇಶ


ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಜುಲೈ 27 ರವರೆಗೆ ಮಳೆ ಮುನ್ಸೂಚನೆ ನೀಡಲಾಗಿದೆ. ಕೆಲವುಕಡೆ ಭಾರೀ ಮಳೆಯಾದರೆ ಇನ್ನು ಕೆಲೆವೆಡೆ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಸುತ್ತಲಿನ ಜಿಲ್ಲೆಗಳಿಗೆ ಸಾಧಾರಣ ಮಳೆ ಸಾಧ್ಯತೆಯಿದೆ. 


ಉತ್ತರಕನ್ನಡ, ಉಡುಪಿ, ದ.ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 27 ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ
ಮಾಡಲಾಗಿದೆ. 


ಇದನ್ನೂ ಓದಿ : ಸಭಾಧ್ಯಕ್ಷರ ಪೀಠದ ಪಕ್ಕ ಫೋಟೋ ಶೂಟ್! ಸ್ಪೀಕರ್ ಸರ್ ಏನಿದು?


ನಿನ್ನೆಯಿಂದ‌ ಇಲ್ಲಿವರೆಗೆ ರಾಜ್ಯದಲ್ಲಿ ಎಲ್ಲೆಲ್ಲಿ ಎಷ್ಟೆಷ್ಟು ಮಳೆ‌ : 
ಹೊನ್ನಾವರ 102 mm
ಮಂಗಳೂರು 54.2mm
ಪಣಂಬೂರು 45 mm
ಶ್ರೀರಾಲಿ 17mm
ಕಾರವಾರ 11mm
ಬೆಳಗಾವಿ ನಗರ 18.8mm
ಬೆಳಗಾವಿ ಎಪಿ 13mm
ಮೂಡಿಗೇರಿ 85mm
ಆಗುಂಬೆ (ಶಿವಮೊಗ್ಗ) 73mm
ಮಂಗಳೂರು (ದ.ಕ.) 21mm
ಗೋಣಿಕೊಪ್ಪಲು 7mm



https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.