ಬೆಂಗಳೂರು : ಕಳೆದ ಎರಡು ಮೂರೂ ದಿನಗಳಿಂದ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದೆ.ಇದೀಗ ಮತ್ತೆ ನಾಲ್ಕು ದಿನಗಳ ಕಾಲ‌‌ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಆಂಧ್ರಪ್ರದೇಶದ ಕರಾವಳಿ ತೀರದಲ್ಲಿ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಅಕ್ಟೋಬರ್ 21 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. 


COMMERCIAL BREAK
SCROLL TO CONTINUE READING

ಆಂಧ್ರಪ್ರದೇಶದ ಕರಾವಳಿ ತೀರದಲ್ಲಿ ಸುಳಿಗಾಳಿ ಎದ್ದಿದೆ.ಇದರ ಪರಿಣಾಮ ರಾಜ್ಯದ ಹವಾಮಾನದ ಮೇಲೆ ಕೂಡಾ ಕಂಡು ಬರಲಿದೆ. ಮುಂದಿನ ನಾಲ್ಕು ದಿನ ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ನಾಲ್ಕು ದಿನ ಮಳೆ ಫಿಕ್ಸ್  ಎನ್ನಲಾಗಿದೆ. 


ಇದನ್ನೂ ಓದಿ : 'ನಾನು ಹೇಳಿದ್ದೀನಿ ಎನ್ನುವ ಕಾರಣಕ್ಕೆ ನೀವು ನಂಬಬೇಡಿ. ಸತ್ಯ, ಸುಳ್ಳನ್ನು ಪರಾಮರ್ಷಿಸಿ ನೋಡಿ'-ಸಿಎಂ ಸಿದ್ದರಾಮಯ್ಯ 
 
ಉತ್ತರ ಒಳನಾಡು,ದಕ್ಷಿಣ ಒಳನಾಡು ಸೇರಿ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.ನಿನ್ನೆ ಮೊನ್ನೆಯಿಂದಲೂ ರಾಜ್ಯದಲ್ಲಿ ನಿರಂತರ‌ ಮಳೆ‌ ಆಗಿದೆ.ಇದೀಗ ಮತ್ತೆ ಇಂದಿನಿಂದ ಅ-21 ರವರೆಗೆ ವ್ಯಾಪಾಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. 


ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ ಸೇರಿ ಧಾರವಾಡ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.ಇಂದು ಈ ಮೇಲಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಚಾಮರಾಜನಗರ, ಬೆಂಗಳೂರು, ಬೆ.ಗ್ರಾಮಾಂತರ ಸೇರಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೂ ಮೂರು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. 


ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ಜೊತೆ ವೇಣುಗೋಪಾಲ್ ಚರ್ಚೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.