ಬೆಂಗಳೂರು : ರಾಜ್ಯದ ಹಲವು ಭಾಗದಲ್ಲಿ ಅಬ್ಬರಿಸಲಿರುವ ವರುಣ ಅರ್ಭಟ ಮುಂದುವರೆದಿದೆ. ಕರಾವಳಿ ಭಾಗದಲ್ಲಿ ಇಂದಿನಿಂದ 4 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ,ಉ.ಕನ್ನಡ.ಉಡುಪಿ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ. ಜುಲೈ 8 ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಜುಲೈ9 ರಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 


COMMERCIAL BREAK
SCROLL TO CONTINUE READING

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಬಹುತೇಕ ಕಡೆಗಳಲ್ಲಿ ಆವಾಂತರಗಳೆ ಸೃಷ್ಟಿಯಾಗಿವೆ. ಇದೀಗ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನಗಳವರೆಗೆ ಅಲರ್ಟ್ ಘೋಷಿಸಲಾಗಿದೆ.ಜುಲೈ ೮ ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿ ಮಾಡಿ ರಾಜ್ಯ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಿದೆ. 


ಇದನ್ನೂ ಓದಿ : ಕಾಂಗ್ರೆಸ್ ಸಚಿವರು ಮತ್ತು ಶಾಸಕರ ತೀವ್ರ ಅಸಮಾಧಾನ


ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ನೀಡಲಾಗಿದೆ. ಇಂದು ಬೆಳಗಾವಿ,ಧಾರವಾಡ,ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದರೆ, ಮಲೆನಾಡು ಶಿವಮೊಗ್ಗ ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಭಾಗದಲ್ಲಿ ಮುಂದಿನ 3 ದಿನ ಆರೆಂಜ್ ಅಲರ್ಟ್,ಮತ್ತೆ 2 ದಿನ ಯೆಲ್ಲೋ ಅಲರ್ಟ್ ನೀದಯಾಲಾಗಿದೆ. ಕೊಡಗು ಜಿಲ್ಲೆಗೆ ಇಂದಿನಿಂದ ಮೂರುದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 


ಬೆಂಗಳೂರಿನಲ್ಲಿ ಮುಂದುವರೆದ ಮೋಡ ಕವಿದ ವಾತಾವರಣವಿರಲಿದೆ. ನಗರದ ಕೆಲ ಭಾಗದಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. 


ಇದನ್ನೂ ಓದಿ : ಸಿಎಂ, ಡಿಸಿಎಂ ಬಗ್ಗೆ ಹೇಳಿಕೆ ನೀಡಿದವರಿಗೆ ನೋಟಿಸ್‌..?


ಈ ನಡುವೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ NDRF ತಂಡ ರವಾನೆ ಮಾಡಲಾಗಿದೆ.ಕಾರವಾರ, ಕುಮಟಾ,ಅಂಕೋಲಾ ಭಾಗಕ್ಕೆ 25ಜನರಿರುವ ಎರಡು NDRF ತಂಡ ರವಾನೆ ಮಾಡಲಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.