ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ ಎಂದು ಹವಾಮಾನ‌ ಇಲಾಖೆ ಮಾಹಿತಿ ನೀಡಿದೆ.


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಜು. 21ರವರೆಗೂ ಭಾರೀ ಮಳೆ(Heavy Rainfall)ಯಾಗಲಿದೆ. ಮುಂದಿನ ನಾಲ್ಕು ದಿನ ಕೂಡಾ ಭಾರೀ‌ ಮಳೆಯಾಗಲಿದೆ ಎಂದು ಹವಾಮಾನ‌ ಇಲಾಖೆ ತಿಳಿಸಿದೆ.


ಇದನ್ನೂ ಓದಿ : CN Ashwatha Narayana : ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ ರಾಜ್ಯ ಸರ್ಕಾರ : ವಿವರಗಳಿಗೆ ಇಲ್ಲಿ ಪರಿಶೀಲಿಸಿ


ರಾಜ್ಯದಲ್ಲಿ ಈಗಾಗಲೇ ನೈರುತ್ಯ ಮಾನ್ಸೂನ್​ನಿಂದಾಗಿ ಮಳೆಯಾಗುತ್ತಿದೆ. ಅಲ್ಲದೆ, ಜು. 18ರವರೆಗೂ ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಹವಾಮಾನ ಇಲಾಖೆ(India Meteorological Department) ಮಾಹಿತಿ ನೀಡಿದೆ. ನೆರೆಯ ರಾಜ್ಯ ಕೇರಳ ಹಾಗೂ ಮಹಾರಾಷ್ಟ್ರ, ತಮಿಳುನಾಡಿನ ನೀಲಗಿರಿಯ ಪಶ್ಚಿಮ ಘಟ್ಟ, ಗುಜರಾತ್​ನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ರಾಯಚೂರು, ಬೀದರ್, ಯಾದಗಿರಿ ಕಲಬುರ್ಗಿ(Kalburgi)ಯಲ್ಲಿ ಇಂದು ಭಾರೀ ಮಳೆಯಾಗಲಿದೆ. ಹಾಸನ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು  ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಇದನ್ನೂ ಓದಿ : Karnataka High Court: ಪೋಷಕರ ಸಂಬಂಧ ಅಕ್ರಮವಾಗಿರಬಹುದು ಆದರೆ ಅವರಿಂದ ಹುಟ್ಟಿದ ಮಗು ಅಲ್ಲ: ರಾಜ್ಯ ಹೈಕೋರ್ಟ್


ಕಳೆದ ನಾಲ್ಕು ದಿನಗಳಿಂದ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದೊಂದು ವಾರದಿಂದ ಕೊಂಚ ವಿರಾಮ ನೀಡಿದ್ದ ಮಳೆ, ಕಳೆದ ಮೂರು ದಿನಗಳಿಂದ ಬಿರುಸು ಕೊಂಡಿದೆ. ಈಗಾಗಲೇ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನು ಮೂರು ದಿನ ಇದೇ ರೀತಿ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಈ ಪ್ರದೇಶಗಳಲ್ಲಿ 'ರೆಡ್​ ಆಲರ್ಟ್'​ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ