ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 


COMMERCIAL BREAK
SCROLL TO CONTINUE READING

ಇನ್ನು ಈ ಮಳೆ ಜು. 21ರವರೆಗೆ ಮಳೆಯ ಏರಿಳಿತ ಮುಂದುವರೆಯುತ್ತಲೇ ಇರಲಿದೆ ಎಂದು ಹವಾಮಾನ ಇಲಾಖೆ(IMD) ಸ್ಪಷ್ಟಪಡಿಸಿದೆ. ಅಲ್ಲದೆ, ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಾದ  ಮಂಗಳೂರು, ಉತ್ತರ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಜೋರಾಗಿದೆ. 


ಇನ್ನು ನೆರೆಯ ರಾಜ್ಯ ಮಹಾರಾಷ್ಟ್ರ, ಗೋವಾ, ಕೇರಳದಲ್ಲಿ ಭಾರೀ ಮಳೆ(Heavy Rain)ಯಾಗುತ್ತಿದೆ. ಮುಂಬೈನಲ್ಲಿ ಧಾರಾಕಾರ ಮಳೆಯಿಂದಾಗಿ ಇಂದು ಬೆಳಗ್ಗೆ ಗೋಡೆ ಕುಸಿತಗೊಂಡು 11 ಜನ ಸಾವನ್ನಪ್ಪಿದ್ದಾರೆ. ಅಲ್ಲದೆ ಮುಂದಿನ 48 ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗೋವಾದಲ್ಲೂ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ