ಬೆಂಗಳೂರು : ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮತ್ತೆ ಮಳೆಯಾಗುತ್ತಿದೆ. ಇಂದು ಕೂಡ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 


COMMERCIAL BREAK
SCROLL TO CONTINUE READING

ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ಜುಲೈ 5ರವರೆಗೂ ಮಳೆ ಮುಂದುವರೆಯಲಿದೆ ಮತ್ತು ಇನ್ನೆರಡು ದಿನ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ(India Meteorological Department) ನೀಡಿದೆ.


ಇದನ್ನೂ ಓದಿ : ಚರಕದಿಂದ ಶ್ರಮ ಸಂಸ್ಕೃತಿಗೆ ಹೊಸ ವ್ಯಾಖ್ಯಾನ


ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಿಂದ ಯಲ್ಲೋ ಅಲರ್ಟ್(Yellow Alert) ಘೋಷಿಸಲಾಗಿತ್ತು.  ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ. ನಾಲ್ಕೈದು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿತ್ತು. ಈ ಭಾಗದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ. 


ಇದನ್ನೂ ಓದಿ : B Sriramulu : ಸಿಎಂ ಬಳಿ ಬೇಸರ ತೋಡಿಕೊಂಡ ಸಚಿವ ಶ್ರೀರಾಮುಲು


ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಇನ್ನು ಮೂರು ದಿನ ಮಳೆ(Heavy Rainfall)ಯ ಆರ್ಭಟ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.


ಇದನ್ನೂ ಓದಿ : Unlock 3.O : ರಾಜ್ಯಾದ್ಯಂತ ಜು. 5 ರಿಂದ ಅನ್ ಲಾಕ್ 3.O ಜಾರಿ : ಏನಿದೆ? ಏನಿಲ್ಲ?


 ಮಲೆನಾಡಿನಲ್ಲೂ ಇಂದು ಮಳೆ(Rainfall)ಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳವರೆಗೆ ಮಳೆಯಾಗಲಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮಳೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ಇಂದಿನಿಂದ ಸೋಮವಾರದವರೆಗೆ ಮಳೆಯಾಗಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.