Gaint Bee Attack: ಒಂದು ದಿನದ ಪ್ರವಾಸಕ್ಕೆ ತೆರಳಿದ್ದ ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ  ಚಿಂತಾಮಣಿ ತಾಲೂಕು ಕೆಂದನಹಳ್ಳಿ ಗ್ರಾಮದ ಬಳಿಯ ತಪತೇಶ್ವರ ಬೆಟ್ಟದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣದ ಬಿಜಿ ವೇಣು ಶಾಲೆಯ 70 ಮಕ್ಕಳು ಶಿಕ್ಷಕರೊಂದಿಗೆ ಚಿಂತಾಮಣಿ ತಾಲೂಕಿನ  ಕೆಂದನಹಳ್ಳಿ ಬಳಿಯ ತಪತೇಶ್ವರ ಬೆಟ್ಟಕ್ಕೆ‌ ಹೋಗಿದ್ದರು. ಬೆಟ್ಟದ ಮೇಲೆ ಪ್ರವಾಸ ಮುಗಿಸಿ ಬೆಟ್ಟದಿಂದ ಇಳಿಯುತ್ತಿದ್ದ ವೇಳೆ ಸಂಜೆ ಐದು ಗಂಟೆ ಸಮಯದಲ್ಲಿ ಶಿಕ್ಷಕರು ಸೇರಿದಂತೆ ಶಾಲಾ ಮಕ್ಕಳ ಮೇಲೆ ದಾಳಿ ಹೆಜ್ಜೇನು ದಾಳಿ ಮಾಡಿರುವುದಾಗಿ ವರದಿಯಾಗಿದೆ. 


ಇದನ್ನೂ ಓದಿ- ಹೊಗೆನಕಲ್ನಲ್ಲಿ ಹಗಲು ದರೋಡೆ: ₹750 ಬೋಟಿಂಗ್ ಗೆ ₹3500 ಶುಲ್ಕ- ಪ್ರವಾಸಿಗರ ಆಕ್ರೋಶ


ಇನ್ನೂ ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಕೆಂದನಹಳ್ಳಿ ಗ್ರಾಮಸ್ಥರು ಹಾಗೂ ಆಗ್ನಿ ಶಾಮಕ  ದಳದ ಸಿಬ್ಬಂದಿ ಮಕ್ಕಳನ್ನು ರಕ್ಷಣೆ ಮಾಡಿ ಅಂಬುಲೆನ್ಸ್ ಮೂಲಕ ಚಿಂತಾಮಣಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೋಡಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಇದನ್ನೂ ಓದಿ- ರಾಜ್ಯ ನಾಯಕರ ಜೊತೆ ಕೈ ಹೈಕಮಾಂಡ್ ಸಭೆ ಮುಕ್ತಾಯ : ಕಗ್ಗಂಟಾಗಿ ಉಳಿದ 15 ವಿಧಾನಸಭಾ ಕ್ಷೇತ್ರ


ಸದ್ಯ ಹೆಜ್ಜೇನು ದಾಳಿ ವೇಳೆ ಮಕ್ಕಳನ್ನು ರಕ್ಷಣೆ ಮಾಡಲು‌ ಮುಂದಾದ ಶಿಕ್ಷಕ ನವೀನ್ ರವರಿಗೆ ಹೆಚ್ಚಾಗಿ ಜೇನು ನೋಣುಗಳು ದಾಳಿ ಮಾಡಿರುವ ಕಾರಣ ಶಿಕ್ಷಕನ ಸ್ಥಿತಿ ಸ್ವಲ್ಪ ಮಟ್ಟಿಗೆ ಗಂಭೀರವಾಗಿದ್ದು ಚಿಕಿತ್ಸೆಯನ್ನು ಮುಂದುವರೆದಿದೆ ಎನ್ನಲಾಗಿದೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.