High Alert : ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ 'ಹೈ ಅಲರ್ಟ'..!

ಶಿವಸೇನೆ ಪುಂಡಾಟ ಹಿನ್ನೆಲೆಯಲ್ಲಿ ಗಡಿಯಲ್ಲಿ ಪೋಲಿಸ್ ಸರ್ಪಗಾವಲು ನೇಮಕ ಮಾಡಲಾಗಿದೆ.

Written by - Channabasava A Kashinakunti | Last Updated : Dec 18, 2021, 03:39 PM IST
  • ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಕಾಗವಾಡದಲ್ಲಿ ಬಿಗಿ ಪಹರೆ
  • ಕರ್ನಾಟಕದ ವಾಹನಗಳ ಮೇಲೆ ಕಲ್ಲು ತೂರಾಟ ಹಿನ್ನಲೆ
  • ಶಿವಸೇನೆ ಪುಂಡಾಟ ಹಿನ್ನೆಲೆಯಲ್ಲಿ ಗಡಿಯಲ್ಲಿ ಪೋಲಿಸ್ ಸರ್ಪಗಾವಲು
High Alert : ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ 'ಹೈ ಅಲರ್ಟ'..! title=

ಚಿಕ್ಕೋಡಿ : ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಕಾಗವಾಡದಲ್ಲಿ ಬಿಗಿ ಪಹರೆ ನಿರ್ಮಿಸಲಾಗಿದೆ.  ಕರ್ನಾಟಕದ ವಾಹನಗಳ ಮೇಲೆ ಕಲ್ಲು ತೂರಾಟ ಹಿನ್ನಲೆಯಲ್ಲಿ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. 

ಶಿವಸೇನೆ ಪುಂಡಾಟ ಹಿನ್ನೆಲೆಯಲ್ಲಿ ಗಡಿಯಲ್ಲಿ ಪೋಲಿಸ್(Police) ಸರ್ಪಗಾವಲು ನೇಮಕ ಮಾಡಲಾಗಿದೆ.

ಈಗಾಗಲೇ ಮಹಾರಾಷ್ಟ್ರದ ಮಿರಜ ಪಟಗಟಣದಲ್ಲಿ ಕರ್ನಾಟಕ(Karnataka) ವಾಹನದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಮುನ್ನಚ್ಚರಿಕಾ ಕ್ರಮವಾಗಿ ಕರ್ನಾಟಕ ಪೋಲಿಸರು ಮಹಾರಾಷ್ಟ್ರ ರಾಜ್ಯಕ್ಕೆ ಬೀಡದೆ ಕರ್ನಾಟಕದ ವಾಹನಗಳನ್ನ ತಡೆ ಹಿಡದಿದ್ದಾರೆ.

ಇದನ್ನೂ ಓದಿ : Sunil Kumar : 'ಕನ್ನಡದ ವಿರುದ್ಧ ಅಗೌರವ ತೋರಿಸುವುದನ್ನು ಸಹಿಸುವುದಿಲ್ಲ'

ಕರ್ನಾಟಕ ಮಹಾರಾಷ್ಟ್ರದ(Karnataka-Maharashtra) ಕೊಂಡಿಯಾಗಿ ಕಾರ್ಯನಿರ್ವಹಿಸುವ ಕಾಗವಾಡ ಪಟ್ಟಣದಲ್ಲಿ ಹೈ ಅಲರ್ಟ ಘೋಷಣೆ ಮಾಡಲಾಗಿದೆ. ಗಡಿಯಲ್ಲಿ ಪೋಲಿಸರು ಮಹಾರಾಷ್ಟ್ರಕ್ಕೆ ತೆರಳದಂತೆ ಕಟ್ಟೆಚ್ಚರವಹಿಸಿದ್ದಾರೆ. 

ಅಲ್ಲದೆ, ಬೆಳಗಾವಿಯಲ್ಲಿ ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(Sangolli Rayanna) ಪ್ರತಿಮೆ ಭಗ್ನಗೊಳಿಸಿರುವ ಹಿನ್ನೆಲೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಶನಿವಾರ(ಡಿ.18) ಬೆಳಗ್ಗೆ 8ರಿಂದ ಭಾನುವಾರ (ಡಿ.19) ಬೆಳಗ್ಗೆ 6ಗಂಟೆವೆಗೆ ನಿಷೇಧಾಜ್ಞೆ(Section 144 in Belagavi) ಜಾರಿಯಲ್ಲಿರಲಿದೆ. ಬೆಳಗಾವಿ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪುಗಂಪುಗಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಈ ಕುರಿತು ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News