ಕರ್ನಾಟಕದ ಕರಾವಳಿಯಲ್ಲಿ ಹೈ ವೇವ್ ಅಲರ್ಟ್ ಘೋಷಿಸಿದ್ದು, ಜೂನ್ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆ ಎಂದು ಘೋಷಿಸಲಾಗಿದೆ. ಗುಡುಗು ಸಹಿತ ಭಾರಿ ಮಳೆ ಘೋಷಿಸಲಾಗಿದೆ. 


COMMERCIAL BREAK
SCROLL TO CONTINUE READING

ರಾಜ್ಯಾದ್ಯಂತ ನೆನ್ನೆಯಿಂದ ಜೂನ್ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಮತ್ತುದಕ್ಷಿಣ ಕನ್ನಡ ಒಳನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ತಿಳಿಸಿದೆ. ಕೆಲೆವೆಡೆ ಭೂ ಕುಸಿತವಾಗುವ ಸಾಧ್ಯತೆ ಎಂದು ತಿಳಿಸಿದ್ದಾರೆ. ನೆನ್ನೆಯಿಂದ ಜೂನ್ 25ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 


ಇದನ್ನು ಓದಿ : ಮನೆ ಸ್ವಚ್ಛಗೊಳಿಸಲು ಈ ಬಟ್ಟೆಗಳ ಬಳಕೆಯನ್ನು ನಿಲ್ಲಿಸಿ, ಇದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ.!


ಇಡೀ ರಾಜ್ಯಾದ್ಯಂತ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನೆನ್ನೆಯಿಂದ ರಾಜ್ಯದಲ್ಲಿ ಹಲವು ಕಡೆ ಹೈ ವೇವ್ ಅಲರ್ಟ್  ಮತ್ತು ಘೋಷಣೆಯಾಗಿದೆ. ಉತ್ತರ ಕರ್ನಾಟಕದ ಒಳನಾಡಿನಲ್ಲಿ ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ  ಸೇರಿದಂತೆ ದಕ್ಷಿಣ  ಒಳನಾಡಿನಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರ  ಹಲವೆಡೆ ಬಿರುಗಾಳಿ ಸಹಿತ ಗುಡುಗಿನೊಂದಿಗೆ ಘೋಷಣೆ ಸಾಧ್ಯತೆ ಇದೆ ಎಂದು ತಿಳಿಸಿದೆ. 


ಕರಾವಳಿಯ ಜಿಲ್ಲೆಗಳಾದ  ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ, ಕೊಡಗು ಜಿಲ್ಲೆಗಳಲ್ಲಿ  ಗಾಳಿ ವೇಗವು 40-50 ಕಿ,ಮೀ  ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. 


ಇದನ್ನು ಓದಿ : ತುಪ್ಪದ ಜೊತೆ ಚಪಾತಿ ತಿನ್ನುತ್ತೀರಾ? ಆರೋಗ್ಯಕರ ಬೆಳವಣಿಗೆಗೆ ಇದು ಉತ್ತಮ ಸಲಹೆ 


ಜೂನ್‌ 24ರಂದು ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ತೀವ್ರ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.