ನವದೆಹಲಿ: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಾವೇರಿ ಸ್ಕೀಂ ಕರಡನ್ನು ಸುಪ್ರೀಂ ಕೋರ್ಟ್ಗೆ ಸೋಮವಾರ ಸಲ್ಲಿಸಿದೆ. ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ಮಾದರಿಯಲ್ಲೇ ಯೋಜನೆ ರೂಪಿಸಿ ಪ್ರಾಧಿಕಾರ ರಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕಾವೇರಿ ಸ್ಕೀಂ ಕರಡಿನಲ್ಲಿ ಕರ್ನಾಟಕಕ್ಕೇ ಸ್ವಲ್ಪ ಸಮಾಧಾನ, ಸ್ವಲ್ಪ ಸಂಕಷ್ಟವಿದೆ. 


COMMERCIAL BREAK
SCROLL TO CONTINUE READING

ಸ್ಕೀಂ ರಚನೆಗೆ ಕೇಂದ್ರ ಸಲ್ಲಿಸಿರುವ ಕರಡಿನ ಮುಖ್ಯಾಂಶಗಳು ಕೆಳಗಿನಂತಿವೆ:


  • ನ್ಯಾಯಮಂಡಳಿ‌ ಆದೇಶ ಮಾರ್ಪಡಿಸಿ ತೀರ್ಪನ ಅನ್ವಯ ಪ್ರಾಧಿಕಾರದ ಸ್ವರೂಪದ ಸ್ಕೀಂ ರಚನೆ.

  • ಕಾವೇರಿ ನೀರಿನ‌ ಸಂಗ್ರಹ, ಹಂಚಿಕೆ ಮತ್ತು ನಿಯಂತ್ರಣ ಕುರಿತು ಪ್ರಾಧಿಕಾರ ಗಮನಹರಿಸಲಿದೆ.

  • ಸಂಬಂಧಿಸಿದ ರಾಜ್ಯಗಳಿಗೆ ನಿಯಮಿತವಾಗಿ ನೀರನ್ನು ಪಡೆಯಲು ಅವಕಾಶ.

  • ಹಂಚಿಕೆಯಾದ ನೀರನ್ನು ಸಂಬಂಧಿಸಿದ ರಾಜ್ಯಗಳಿಗೆ ಕೊಡಿಸಲು ಪ್ರಾಧಿಕಾರವು ಪ್ರಯತ್ನಿಸಲಿದೆ.

  • ಪ್ರಾಧಿಕಾರ ತನ್ನ ಸಹಾಯಕ್ಕಾಗಿ ಒಂದು ಅಥವಾ ಎರಡು ಸಮಿತಿ ನೇಮಿಸಿಕೊಳ್ಳುವ ಅಧಿಕಾರ ಹೊಂದಿರುತ್ತದೆ.

  • ನೀರಿನ‌ ಒಳಹರಿವು, ಸಂಗ್ರಹ, ಬಳಕೆ ಮತ್ತು ಬಿಡುಗಡೆ ಕುರಿತಂತೆ 10 ದಿನಕ್ಕೊಮ್ಮೆ ಪ್ರಾಧಿಕಾರ ಪರಿಶೀಲಿಸಲಿದೆ.

  • ಮಳೆ ಕೊರತೆಯನ್ನು ಪರಿಶೀಲಿಸಿ ಅರಿಯಲಿರುವ ಪ್ರಾಧಿಕಾರವು ಕೊರತೆಗೆ ಅನುಗುಣವಾಗಿಯೇ ನೀರು ಹಂಚಲಿದೆ

  • ಜಲಾಶಯಗಳ ಮೇಲುಸ್ತುವಾರಿ ಹಾಗೂ ನೀರು ಬಿಡುಗಡೆಗೆ ಸಮಿತಿಯ ಸಹಕಾರ ಪಡೆಯಲಿದೆ.

  • ಆಯಾ ರಾಜ್ಯಗಳ ಬೆಳೆಯ ಪ್ರಮಾಣ, ಬೆಳೆ ಪದ್ಧತಿ, ನೀರಾವರಿ ಅವಲಂಭನೆ ಅರಿತು ಮತ್ತು ಕುಡಿಯುವ ಹಾಗೂ ಕೈಗಾರಿಕೆಗೂ ಮಳೆಯ ಪ್ರಮಾಣ ಆಧರಿಸಿಯೇ ನಿರ್ಧರಿಸಲಿದೆ.

  • ಬೆಳೆಯ ಪದ್ಧತಿಯಲ್ಲಿ ಬದಲಾವಣೆ ಹಾಗೂ ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳುವ ಮೂಲಕ ನೀರಿನ‌ ನಿಯಮಿತ ಬಳಕೆ ಬಗ್ಗೆ ಪ್ರಾಧಿಕಾರವು ಸಲಹೆ ನೀಡಬೇಕು.

  • ಬಿಳಿಗುಂಡ್ಲು ಮಾಪಕ ಕೇಂದ್ರದ ಮೂಲಕ ನೀರಿನ ಅಳತೆ ಮಾಡುವ ಜವಾಬ್ದಾರಿ ಕೂಡ ಪ್ರಾಧಿಕಾರದ್ದಾಗಿರುತ್ತದೆ.

  • ಪ್ರಾಧಿಕಾರವು ಅತ್ಯುತ್ತಮ ಸಂವಹನ ಜಾಲ ರೂಪಿಸಿ ಎಲ್ಲಾ ಅಂಕಿ ಅಂಶಗಳು ಕಣಿವೆ ವ್ಯಾಪ್ತಿಯ ನಾಲ್ಕು ರಾಜ್ಯಗಳಿಗೆ ಲಭ್ಯವಾಗುವಂತೆ ಮಾಡಲಿದೆ. ಇದಕ್ಕಾಗಿ ಕೇಂದ್ರ ಜಲ ಆಯೋಗ ಮತ್ತು ಕೇಂದ್ರ-ರಾಜ್ಯ ಸರ್ಕಾರದ ಸಂಬಂಧಿಸಿದ ಇಲಾಖೆಗಳ ನೆರವು ಪಡೆಯಲಿದೆ.

  • ಕಣಿವೆ ವ್ಯಾಪ್ತಿಯ ರಾಜ್ಯಗಳು ಆಯಾ ವರ್ಷದ ಬೇಡಿಕೆ ಪಟ್ಟಿಯನ್ನು ಜಲವರ್ಷದ ಆರಂಭದಲ್ಲೇ ಪ್ರಾಧಿಕಾರಕ್ಕೆ ನೀಡುವುದು ಕಡ್ಡಾಯವಾಗಿದೆ.

  • ಬೇರೆ ಬೇರೆ ಜಲಾನಯನ ಪ್ರದೇಶಗಳಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ಸುರಿಯುವ ಮಳೆಯ ಪ್ರಮಾಣ ಆಧರಿಸಿ ಬೇಡಿಕೆ ಪಟ್ಟಿ ತಯಾರಿಸುವುದು ಕಡ್ಡಾಯ.

  • ನೀರಿನ ಸದ್ಭಳಕೆ ಮತ್ತು ಸಂಗ್ರಹ ಕುರಿತಂತೆ ಪ್ರಾಧಿಕಾರವು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡುವ ಅಧಿಕಾರ ಹೊಂದಿದೆ.

  • ಈ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸಲಿರುವ ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಗಳು ನೇಮಕ‌ ಪ್ರಕ್ರಿಯೆ ಕೇಂದ್ರ ಸರ್ಕಾರದ ನಿಯಾಮವಳಿಗಳ ಪ್ರಕಾರ ಆಗಬೇಕು.

  • ಪ್ರಾಧಿಕಾರದ ಕೇಂದ್ರ ಕಚೇರಿಯು ಬೆಂಗಳೂರಿನಲ್ಲೇ ಇರಬೇಕು.

  • ಕಾವೇರಿ ಕಣಿವೆಯಲ್ಲಿ ಕೈಗೊಳ್ಳುವ ಯಾವುದೇ ಕಾಮಗಾರಿಯನ್ನು ಪರಿಶೀಲಿಸುವ ಪ್ರಾಧಿಕಾರ ಹಾಗೂ ಅದರ ಸದಸ್ಯರಿಗೆ ಇರುತ್ತದೆ.

  • ರಾಜ್ಯಗಳು ತೀರ್ಪನ ಅನುಷ್ಠಾನಕ್ಕೆ ಸಮ್ಮತಿಸದಿದ್ದರೆ ಮತ್ತೆ ಕೇಂದ್ರ ಸರ್ಕಾರದ ಮೊರೆಹೋಗುವುದು.

  • ಕಾವೇರಿ ಜಲ ನಿಯಂತ್ರಣ ಸಮಿತಿ ಅಗತ್ಯ ಎಂದು ಕಂಡುಬಂದಲ್ಲಿ ಅದನ್ನು ರಚಿಸುವ ಅಧಿಕಾರ ಪ್ರಾಧಿಕಾರಕ್ಕೆ ಇರುತ್ತದೆ.

  • ಪ್ರಾಧಿಕಾರವು ಪ್ರತಿವರ್ಷ ಸೆಪ್ಟೆಂಬರ್ 30ರೊಳಗೆ ತನ್ನ ಕಾರ್ಯಚಟುವಟಿ ಒಳನ್ನೊಳಗೊಂಡ ಪಟ್ಟಿಯನ್ನು ಕಣಿವೆ ವ್ಯಾಪ್ತಿಯ ನಾಲ್ಕು ರಾಜ್ಯಗಳಿಗೆ ನೀಡಬೇಕು.

  • ಪ್ರಾಧಿಕಾರದಲ್ಲಿ ಇರುವ ಮಾಹಿತಿಯನ್ನು ರಾಜ್ಯಗಳು ಬಯಸಿದಾಗ ಕೊಡಬೇಕು.

  • ನೀರಿನ‌ ಸಂಗ್ರಹ, ಬಳಕೆ, ಬಿಡುಗಡೆ, ಮಾಪನ ‌ಕೇಂದ್ರಗಳ ಅಳವಡಿಕೆಯ ಖರ್ಚು ವೆಚ್ಛವನ್ನು ಆಯಾ ವ್ಯಾಪ್ತಿಯ ರಾಜ್ಯಗಳೇ ಭರಿಸಬೇಕು.

  • ಪ್ರಾಧಿಕಾರದ ಸಭೆ ಮತ್ತು ಚಟುವಟಿಕೆಗಳ ಎಲ್ಲಾ ದಾಖಲೆಗಳು ಹಾಗೂ ಲೆಕ್ಕಪತ್ರ ಸಂಗ್ರಹಿಸಿಡಲು ಸೂಕ್ತವಾದ ಕಚೇರಿ ಸ್ಥಾಪಿಸಬೇಕು.

  • ದಾಖಲೆಗಳು ಮತ್ತು ಮಾಪನ‌ ದತ್ತಾಂಶಗಳು ಈ ಕಚೇರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡಕ್ಕೂ ಲಭ್ಯವಿರಬೇಕು.