High Court : 'ತೀರ್ಪು ಬರುವವರೆಗೂ ಧಾರ್ಮಿಕ ಉಡುಗೆ ತೊಡಬಾರದು' : ಹೈಕೋರ್ಟ್‌ ಖಡಕ್ ಸೂಚನೆ

ಆದಷ್ಟು ಬೇಗ ಈ ಪ್ರಕರಣದ ತೀರ್ಪು ಪ್ರಕಟಿಸಲಾಗುವುದು ಎಂದು ಕೋರ್ಟ್ ಹೇಳಿದೆ. ಅಲ್ಲಿಯವರೆಗೆ ಶಾಂತಿ ಕಾಪಾಡುವುದು ಅಗತ್ಯ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಸೋಮವಾರ ನಡೆಸಲಿದೆ.

Written by - Channabasava A Kashinakunti | Last Updated : Feb 10, 2022, 06:17 PM IST
  • ಹೈಕೋರ್ಟ್‌ನಲ್ಲಿ ಹಿಜಾಬ್ ವಿವಾದದ ವಿಚಾರಣೆ
  • ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಉಡುಪುಗಳಿಗೆ ನ್ಯಾಯಾಲಯ ನಿಷೇಧ
  • ಶಾಂತಿ ಕಾಪಾಡುವುದು ಅತ್ಯಂತ ಮುಖ್ಯ ಎಂದ ಹೈ ಕೋರ್ಟ್
High Court : 'ತೀರ್ಪು ಬರುವವರೆಗೂ ಧಾರ್ಮಿಕ ಉಡುಗೆ ತೊಡಬಾರದು' : ಹೈಕೋರ್ಟ್‌ ಖಡಕ್ ಸೂಚನೆ title=

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಅಂತ್ಯ ಕಾಣುತ್ತಿಲ್ಲ. ಈ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಕುರಿತು ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್‌ನ ವಿಸ್ತೃತ ಪೀಠ ಗುರುವಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ತೀರ್ಪು ಬರುವವರೆಗೂ ಧಾರ್ಮಿಕ ಉಡುಗೆ(Religious Dress) ತೊಡಬಾರದು ಎಂದು ಕೋರ್ಟ್ ಹೇಳಿದೆ. ಆದಷ್ಟು ಬೇಗ ಈ ಪ್ರಕರಣದ ತೀರ್ಪು ಪ್ರಕಟಿಸಲಾಗುವುದು ಎಂದು ಕೋರ್ಟ್ ಹೇಳಿದೆ. ಅಲ್ಲಿಯವರೆಗೆ ಶಾಂತಿ ಕಾಪಾಡುವುದು ಅಗತ್ಯ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಸೋಮವಾರ ನಡೆಸಲಿದೆ.

ಕೋರ್ಟ್ ಆದೇಶ ಬರುವವರೆಗೂ ಧಾರ್ಮಿಕ ಉಡುಗೆ ನಿಷೇಧ

ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್(Karnataka High Court), ಶಾಲಾ-ಕಾಲೇಜುಗಳಿಗೆ ತಮ್ಮ ಕೆಲಸ ಆರಂಭಿಸುವಂತೆ ಸೂಚಿಸಿದೆ. ಈ ವಿಚಾರದಲ್ಲಿ ಆದೇಶ ಹೊರಬೀಳುವವರೆಗೆ ಯಾವುದೇ ವಿದ್ಯಾರ್ಥಿ ಧಾರ್ಮಿಕ ಉಡುಗೆ ಧರಿಸಿ ಶಿಕ್ಷಣ ಸಂಸ್ಥೆಗೆ ಹೋಗಬಾರದು ಎಂದೂ ನ್ಯಾಯಾಲಯ ಸೂಚಿಸಿದೆ. ಅಲ್ಲದೆ, ಶಿಕ್ಷಣ ಸಂಸ್ಥೆಗಳಿಗೆ ಹೋಗುವ ವಿದ್ಯಾರ್ಥಿಗಳು ಧಾರ್ಮಿಕ ಉಡುಗೆ ತೊಡುವಂತೆ ಒತ್ತಡ ಹೇರುವುದಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ : ಹಿಜಾಬ್, ಕೇಸರಿ ಶಾಲು ವಿವಾದದ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಕಿಡಿ

ಧಾರ್ಮಿಕ ಉಡುಪು ಧರಿಸಬೇಕೆಂಬ ಹಠ ಇರಬಾರದು

ಈ ವಿಚಾರ ಇತ್ಯರ್ಥವಾಗುವ ತನಕ ಎಲ್ಲ ಧಾರ್ಮಿಕ ಉಡುಪು ಧರಿಸುವಂತೆ ಒತ್ತಾಯ ಮಾಡಬಾರದು ಎಂದು ಕೋರ್ಟ್ ಹೇಳಿದೆ. ಹಿಜಾಬ್(Hijab) ಧರಿಸುವುದು ಮೂಲಭೂತ ಹಕ್ಕಾಗಿದೆಯೇ ಎಂಬುದನ್ನು ನೋಡೋಣ ಎಂದು ಈ ಹಿಂದೆ ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಹೇಳಿತ್ತು.

'ಅಂತಿಮ ಆದೇಶದವರೆಗೆ ಕಾಯಿರಿ'

ನ್ಯಾಯಾಲಯದ ಮೌಖಿಕ ಪ್ರಕ್ರಿಯೆಗಳನ್ನು ವರದಿ ಮಾಡದಂತೆ ಮಾಧ್ಯಮಗಳಿಗೆ(Media) ನ್ಯಾಯಾಲಯ ಸೂಚನೆ ನೀಡಿದೆ, ಅಂತಿಮ ಆದೇಶದವರೆಗೆ ಕಾಯಿರಿ. ಹಿಜಾಬ್‌ಗೆ ಸಂಬಂಧಿಸಿದ ಈ ವಿಷಯವನ್ನು ಬುಧವಾರ ಹೈಕೋರ್ಟ್‌ನ ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರ ಪೀಠವು ವಿಚಾರಣೆ ನಡೆಸುತ್ತಿ ದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು  Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News