ಬೆಂಗಳೂರು: ಶುಕ್ರವಾರ ಕನ್ನಡಪರ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಮಾಡದಂತೆ ಗೃಹ ಸಚಿವ ಪರಮೇಶ್ವರ್ ಹೋರಟಗಾರರಿಗೆ ಮನವಿ ಮಾಡಿದ್ದಾರೆ‌. 


COMMERCIAL BREAK
SCROLL TO CONTINUE READING

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ನಿನ್ನೆ ಬೆಂಗಳೂರು ಬಂದ್ ನಡೆಸಲಾಗಿದ್ದು ಈ ವೇಳೆ ಯಾವುದೇ ಅಹಿತಕರ ಘಟನೆಯಾಗಿಲ್ಲ. ಬಂದ್ ನಡೆಸಿದ ಎಲ್ಲಾ ಸಂಘಟನೆಗಳು ಶಾಂತಿಯುತವಾಗಿ ಬಂದ್ ಮಾಡಿವೆ. ಎಲ್ಲಾ ಸಂಘಟನೆಗಳಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಪೊಲೀಸರು ಜವಬ್ದಾರಿಯಿಂದ ಕೆಲಸ ನಿರ್ವಹಿಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. 


ಇದನ್ನೂ ಓದಿ- 3000 ಕ್ಯೂಸೆಕ್ ನೀರು ಹರಿಸಲು ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ


ಕರ್ನಾಟಕ ಬಂದ್ ಮಾಡದಂತೆ ಮನವಿ: 
ಸೆಪ್ಟೆಂಬರ್ 29ರ ಕರ್ನಾಟಕ ಬಂದ್ ಮಾಡಬೇಡಿ ಅಂತಾ ಸಂಘಟನೆಗಳಲ್ಲಿ ಮನವಿ ಮಾಡುತ್ತೇನೆ. ಬೇಕಾದರೆ  ಕಾನೂನು ಚೌಕಟ್ಟಿನಲ್ಲಿ ಪ್ರೊಟೆಸ್ಟ್ ಮಾಡಿಕೊಳ್ಳಿ, ಬಂದ್ ನಡೆಸಬೇಡಿ. ಬಂದ್ ನಿಂದ ಯಾವುದೇ ಪ್ರಯೋಜನ ಇಲ್ಲ. ಕಾವೇರಿ ನೀರು ಪ್ರಾಧಿಕಾರಿ ನೀಡಿರುವ ಆದೇಶ ಪಾಲಿಸೋದು ಅನಿವಾರ್ಯ ಎಂದರು. 


ಇದನ್ನೂ ಓದಿ- ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ


ಸೆಪ್ಟೆಂಬರ್ 29 ಕ್ಕೂ ಪೊಲೀಸ್ ಇಲಾಖೆಯಿಂದ ಭದ್ರತೆ ಮಾಡಿಕೊಳ್ಳಲಾಗುತ್ತೆ. ಈಗಾಗಲೇ ಡಿಜಿಯವರು ಎಲ್ಲಾ ಜಿಲ್ಲಾ ಎಸ್ಪಿಗಳಿಗೆ ಭದ್ರತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾರಾದರು ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾದ್ರೆ ಕ್ರಮ ತೆಗೆದುಕೊಳ್ಳಲಾಗುತ್ತೆ. ಶಾಂತಿಯುತವಾಗಿ ಬಂದ್ ಮಾಡುವಂತೆ ಗೃಹ ಸಚಿವ ಪರಮೇಶ್ವರ್ ಹೋರಾಟಗಾರರಿಗೆ ಮನವಿ ಮಾಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.