ಬೆಂಗಳೂರು :ಪಿಎಸ್ಐ ನೇಮಕಾತಿ ಪರೀಕ್ಷೆ ನಿಗದಿಯಾಗಿದ್ದ ದಿನವೇ ಅಂದರೆ ಸೆ.೨೨ ಕ್ಕೆ ಯುಪಿಎಸ್‌ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಯುಪಿಎಸ್‌ಸಿಗಿಂತ ಮೊದಲೇ ನಾವು ಪಿಎಸ್‌ಐ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದ್ದೇವೆ.ಮುಂದೂಡುವ ಬಗ್ಗೆ ಸಾಧ್ಯತೆ ಇದ್ದರೆ,ಹೆಚ್ಚಿನ ಮನವಿಗಳು ಬಂದಿದ್ದರೆ ಮನವಿಯನ್ನು ಪರಿಗಣಿಸಬಹುದು ಎಂದು ಹೇಳಿದ್ದಾರೆ.ಈ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಈಗಾಗಲೇ ಪಿಎಸ್ಐ ನೇಮಕಾತಿ ಬಹಳ ವಿಳಂಬವಾಗಿದೆ.ಈ ಹಿಂದೆ ಗೃಹ ಸಚಿವನಾಗಿದ್ದಾಗ ಯಾವುದೇ ಅಡೆತಡೆಗಳಿಲ್ಲದೇ ಸಾವಿರಾರು ಹುದ್ದೆಗಳ ನೇಮಕಾತಿ ಸುಲಭವಾಗಿ ನಡೆದಿದೆ‌.ಪಿಎಸ್ಐ ಹಗರಣದ ಬಳಿಕ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿದೆ.ಫಲಿತಾಂಶ ಪ್ರಕಟಿಸಲು ಸಹ ಕೋರ್ಟ್‌ಗೆ ಹೋಗುತ್ತಿದ್ದಾರೆ. ಆದರೂ ಫಲಿತಾಂಶ‌ ಪ್ರಕಟಿಸಲು ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.


ಇದನ್ನೂ ಓದಿ : ನಾನು ಸಾಯುವವರೆಗೂ ಈ ರೀತಿ ಕೇಸ್‌ಗಳನ್ನು ಎದುರಿಸಬೇಕು!: ಡಿ.ಕೆ.ಶಿವಕುಮಾರ್


ಹೆಚ್.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ,ಮುರುಗೇಶ್ ನಿರಾಣಿ ವಿರುದ್ಧ ಅಕ್ರಮದ ಕುರಿತು ಪ್ರಾಸಿಕ್ಯೂಷನ್‌ಗೆ ವರ್ಷಾನುಗಟ್ಟಲೇ ಅವಕಾಶ ಕೊಟ್ಟಿಲ್ಲ ಎಂಬುದನ್ನು ಅಭಿಷೇಕ್ ಮನು ಸಿಂಘ್ವಿ ಅವರು ನ್ಯಾಯಾಲಯದ‌ ಮುಂದೆ ಪ್ರಸ್ತಾಪಿಸಿದ್ದಾರೆ.ರಾಜ್ಯಪಾಲರು ತರಾತುರಿಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬ ಅಂಶವನ್ನು ಗಮನಕ್ಕೆ ತಂದಿದ್ದಾರೆ.ಈ ವಿಚಾರವನ್ನು ರಾಷ್ಟ್ರಪತಿ ಭೇಟಿಗೆ ಹೋದಾಗ ಪ್ರಸ್ತಾಪಿಸುತ್ತೇವೆ ಎಂದು ಹೇಳಿದ್ದಾರೆ. 


ಇದನ್ನೂ ಓದಿ : ರಾಯಚೂರು ಡಿಡಿಪಿಐ ಕಚೇರಿ ಬಳಿ ಬೃಹತ್‌ ಮರದ ಕೊಂಬೆ ಮುರಿದು 3 ಕಾರು ಜಖಂ


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ