ಚಿಕ್ಕಬಳ್ಳಾಪುರ: ಟಾಟಾ ಸುಮೋ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಪರಿಣಾಮ ಮೂವರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ತಾಲೂಕಿನ ಸೆಟ್ ದಿನ್ನೇ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ಪ್ರತಿದಿನ ಬೆಳಿಗ್ಗೆ ಎದ್ದ ನಂತರ ಬಾಳೆಹಣ್ಣು ತಿನ್ನಿ : ದೇಹದಲ್ಲಿ ಈ 7 ಅದ್ಭುತಗಳು ಜರುಗುತ್ತವೆ..!


ಮೃತ ವ್ಯಕ್ತಿಗಳನ್ನು ರಾಜೀಯಾ ಶಾಹಿನ್(50), ಮೇಹಿಮುದುಲ್ (43) ಮತ್ತು ಮೊಲ್ಲಾನಾ ಶಾಹನ್ ಎಂದು ಗುರುತಿಸಲಾಗಿದೆ. ಇವರೆಲ್ಲವರು ಕೋಲಾರ ಮೂಲದವರು ಎಂದು ತಿಳಿದುಬಂದಿದೆ.


ಕೋಲಾರದಿಂದ ಪೆನುಗೊಂಡ ದರ್ಗಾ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಟಾಟಾ ಸುಮೋ ಹಾಗೂ ಲಾರಿ ನಡುವೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಕಾರು ಚಾಲಕನ ಅಜಾಗರೂಕತೆಯಿಂದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.


ಇದನ್ನೂ ಓದಿ: ಹರ್ಷಿಕಾ ಪೂಣಚ್ಚ ಬೇಬಿ ಶವರ್‌ ನಲ್ಲಿ ಮಿಂಚಿದ ನಟಿಯರು... ಫೋಟೋಸ್‌ ಇಲ್ಲಿವೆ ನೋಡಿ


ಈ ಅಪಘಾತದಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇನ್ನುಳಿದ ನಾಲ್ಕು ಜನರು ಕೂಡ ಗಾಯಗೊಂಡಿದ್ದು, ಅವರನ್ನು ಕೂಡ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರ ಆರೋಗ್ಯದ ಮೇಲೆ ಹೆಚ್ಚಿನ ಕಳವಳ ಇಲ್ಲ ಎಂದು ತಿಳಿದು ಬಂದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ