ವಿಜಯನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಹೊತ್ತಿ ಉರಿದಿದ್ದು ನಾಲ್ವರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 


COMMERCIAL BREAK
SCROLL TO CONTINUE READING

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ರಾಘವೇಂದ್ರ ಶೆಟ್ಟಿ ಎನ್ನುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ (Fire) ತಗುಲಿದ್ದು ರಾಘವೇಂದ್ರ ಶೆಟ್ಟಿ ಹಾಗೂ ಅವರ ಪತ್ನಿ ರಾಜಶ್ರೀ ಮನೆಯಿಂದ ಓಡಿಬಂದದಿದ್ದಾರೆ. ಹಾಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 


ಇದನ್ನೂ ಓದಿ- ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಮದುಮಗ ಸೇರಿ ಇಬ್ಬರು ಸಾವು


ಈ ಘಟನೆಯಲ್ಲಿ ವೆಂಕಟ್ ಪ್ರಶಾಂತ್ (42), ಪತ್ನಿ ಡಿ. ಚಂದ್ರಕಲಾ (38), ಮಕ್ಕಳಾದ ಎಚ್. ಎ ಅರ್ದ್ವಿಕ್(16) ,  ಪ್ರೇರಣಾ ( 8 ) ಮನೆಯಿಂದ ಹೊರಬರಲಾಗದೇ ಮೃತಪಟ್ಟಿದ್ದಾರೆ. 


ವಿದ್ಯುತ್ ಶಾರ್ಟ್ ಸರ್ಕ್ಯೂಟ್ (Short Circuit) ಹಾಗೂ ಎ.ಸಿ.ಲೀಕ್ ನಿಂದಾಗಿ ನಿನ್ನೆ ತಡರಾತ್ರಿ ಈ ದುರ್ಘಟನೆ ಸಂಭವಿಸಿದ್ದು ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.


ಇದನ್ನೂ ಓದಿ- ಗೃಹ ಸಚಿವರು ಆಗಮಿಸಬೇಕಾದ ದಾರಿಯಲ್ಲಿ ಶಾರ್ಟ್ ಸರ್ಕ್ಯೂಟ್; ಬದಲಾದ ಮಾರ್ಗ


ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ತಹಸೀಲ್ದಾರ್ ವಿಶ್ವಜಿಜ್ ಮೆಹ್ತಾ, ಕುಟುಂಬಸ್ಥರಿಂದ ಮಾಹಿತಿ ಪಡೆಯುತ್ತಿದ್ದಾರೆ.  


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.