ಬೆಂಗಳೂರು: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅಖಾಡಕ್ಕೆ ಇಳಿದಿದ್ದಾರೆ.ಬಿಜೆಪಿ ಹೈಕಮಾಂಡ್ ಶಿಗ್ಗಾವಿ ಕ್ಷೇತ್ರದ ಅಧಿಕೃತ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅವರನ್ನು ಕಣಕ್ಕೆ ಇಳಿಸಿದೆ.ಸುಮಾರು 60 ಆಕಾಂಕ್ಷಿಗಳು ಈ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನ ಆಕಾಂಕ್ಷಿಯಾಗಿದ್ದರು, ಆದರೆ ರಾಜಕೀಯ ಲೆಕ್ಕಾಚಾರದ ಆಧಾರದ ಮೇಲೆ ಅಂತಿಮವಾಗಿ ಈಗ ಭರತ್ ಬೊಮ್ಮಾಯಿ ಅವರಿಗೆ ಬಿಜೆಪಿ ಮಣೆ ಹಾಕಿದೆ.


COMMERCIAL BREAK
SCROLL TO CONTINUE READING

ಭರತ್ ಬೊಮ್ಮಾಯಿಗೆ ಟಿಕೆಟ್ ಸಿಗಲು ಕಾರಣಗಳು:


1) ಬಸವರಾಜ ಬೊಮ್ಮಾಯಿ ಸತತವಾಗಿ 4 ಬಾರಿ ಗೆದ್ದ ಕ್ಷೇತ್ರ ಶಿಗ್ಗಾವಿ


2) ಬಸವರಾಜ ಬೊಮ್ಮಾಯಿ ಸಂಪೂರ್ಣ ಪ್ರಾಬಲ್ಯ ಹೊಂದಿರುವ ಕ್ಷೇತ್ರ


3) ಲಿಂಗಾಯತ ಮತದಾರರೇ ಹೆಚ್ಚಾಗಿರುವ ಕ್ಷೇತ್ರ


4) ಬಿ.ಎಸ್ ಯಡಿಯೂರಪ್ಪ ಹಾಗೂ ಬಿ.ವೈ ವಿಜಯೇಂದ್ರ ಅವರೂ ಭರತ್ ಬೊಮ್ಮಾಯಿ ಸ್ಪರ್ಧೆಗೆ ಸಂಪೂರ್ಣ ಸಾಥ್ ನೀಡುವ ಭರವಸೆ ನೀಡಿದ್ದು


5) ಮಾಜಿ ಸಚಿವ ಮುರುಗೇಶ್ ನಿರಾಣಿ ಶಿಗ್ಗಾವಿ ಉಪಚುನಾವಣೆ ಸ್ಪರ್ದೆಗೆ ಆಸಕ್ತಿ ತೋರದೆ ಹಿಂದೆ ಸರಿದಿದ್ದರಿಂದ ಭರತ್ ಟಿಕೆಟ್ ಹಾದಿ ಸುಲಭ ಆಯಿತು


6) ಶಿಗ್ಗಾವಿ ಕ್ಷೇತ್ರದಲ್ಲಿ ಪ್ರಬಲ ಪರ್ಯಾಯ ಬಿಜೆಪಿ ಟಿಕೆಟ್ ಆಕಾಂಕ್ಷಿಗಳೇ ಇಲ್ಲದಿರುವುದು


7) ಭರತ್ ಬೊಮ್ಮಾಯಿ 2023 ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತಂದೆ ಪರವಾಗಿ ಶಿಗ್ಗಾವಿ ಕ್ಷೇತ್ರದಲ್ಲಿ ಸಂಘಟನೆ ಮಾಡಿದ್ದು


8) ತಂದೆಯ ರಾಜಕೀಯ ಪಟ್ಟು ತಂತ್ರಗಾರಿಕೆಗಳನ್ನು ಹತ್ತಿರದಿಂದ ನೋಡಿ ರಾಜಕೀಯಕ್ಕಿಳಿಯುವ ನಿರ್ಧಾರ ತೆಗೆದುಕೊಂಡ ಭರತ್ ಬೊಮ್ಮಾಯಿ


9) ಬಿಜೆಪಿ ವರಿಷ್ಟರ ಜೊತೆ ಬಸವರಾಜ ಬೊಮ್ಮಾಯಿ ಬಾಂಧವ್ಯ ಹೊಂದಿರುವುದು ಭರತ್ ಸ್ಪರ್ದೆಗೆ ಅನುಕೂಲ ಆಯಿತು


10) ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಬಂದಾಗ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡುವಂತೆ ಸ್ಥಳೀಯರಿಂದ ಆಗ್ರಹ ಕೇಳಿ ಬಂದಿತ್ತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.