ಹುಬಳ್ಳಿ : ಧಾರವಾಡ ರಸ್ತೆ ಅಪಘಾತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.  ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ಬಳಿ ಲಾರಿ-ಬಸ್ ಮುಖಾಮುಖಿ ಡಿಕ್ಕಿಯಾಗಿ  9 ಜನ ಮೃತಪಟ್ಟಿದ್ದಾರೆ.  ಈ ಪೈಕಿ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಉಳಿದವರು ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ಬಳಿ ರಾತ್ರಿ  ನಡೆದ  ಲಾರಿ-ಬಸ್ ಮುಖಾಮುಖಿ ಡಿಕ್ಕಿಯ ಪರಿಣಾಮ 9 ಜನ ಪ್ರಾಣ ಕಳೆದುಕೊಂಡಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅನೇಕ ಮಂದಿ ಗಾಯಗೊಂಡಿದ್ದಾರೆ.  ತಾರಿಹಾಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ 4ರ ಘಟನೆ ಸಂಭವಿಸಿದೆ. 


ಇದನ್ನೂ ಓದಿ : ಡ್ಯಾಮ್‌ ಗೋಡೆ ಮೇಲೆ ಯುವಕನ ಚೆಲ್ಲಾಟ: ಬ್ಯಾಲೆನ್ಸ್‌ ತಪ್ಪಿ ಕೆಳಗೆ ಬಿದ್ದ ದೃಶ್ಯ ನೋಡಿ!


ಅಪಘಾತಕ್ಕೆ ಈಡಾದ ಬಸ್ಸು ಮಹಾರಾಷ್ಟ್ರ ದ ಕೊಲ್ಹಾಪುರದಿಂದ ಬೆಂಗಳೂರಿಗೆ ತೆರುಳಿತ್ತಿತ್ತು. ಲಾರಿ ಧಾರವಾಡದ ಕಡೆ ಹೊರಟಿತ್ತು.  ಮೃತರೆಲ್ಲರೂ ಮಹಾರಾಷ್ಟ್ರದ ಕೊಲ್ಹಾಪುರ ಮೂಲದವರು ಎನ್ನಲಾಗಿದೆ.  ನ್ಯಾಷನಲ್ ಟ್ರಾವೆಲ್ಸ್ ನ KA 51 AA 7146 ನಂಬರಿನ ಬಸ್ ಹಾಗೂ MH 16 AY 6916 ನಂಬರಿನ ಲಾರಿ ಮಧ್ಯೆ ಅಪಘಾತ ನಡೆದಿದೆ. ಹುಬ್ಬಳ್ಳಿಯ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಗಾಯಗೊಂಡರವನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 


ಅಪಘಾತದಲ್ಲಿ ಮೃತಪಟ್ಟವರನ್ನು  ಇಚಲಕರಂಜಿಯ ಬಾಬಾಸೋ ಅಣ್ಣಾಸೋ ಚೌಗಲೆ , ನ್ಯಾಷನಲ್ ಟ್ರಾವಲ್ಸ್ ಚಾಲಕರಾದ ಅತಾವುಲ್ಲಾ ಹಾಗೂ ನಾಗರಾಜ, ಮೈಸೂರು ಮೂಲದ ಮೊಹಮ್ಮದ್ ಅಯಾನ್ ಎಂದು ಗುರುತಿಸಲಾಗಿದೆ. ಉಳಿದವರ ಗುರುತು ಇನ್ನು ಪತ್ತೆಯಾಗಿಲ್ಲ. 


ಇದನ್ನೂ ಓದಿ : Vegetable Price: ಇಂದು ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಎಷ್ಟಿದೆ ಗೊತ್ತಾ?


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.