ಬಾದಾಮಿ ವಿಧಾನಸಭೆ ಕ್ಷೇತ್ರದ ನೂರಾರು ಮುಖಂಡರಿಂದ ಸಿದ್ದರಾಮಯ್ಯ ಭೇಟಿ

ಸಿದ್ದರಾಮಯ್ಯರನ್ನು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವಿ ಮಾಡಿದ ಮುಖಂಡರು.

Last Updated : Apr 12, 2018, 01:58 PM IST
ಬಾದಾಮಿ ವಿಧಾನಸಭೆ ಕ್ಷೇತ್ರದ ನೂರಾರು ಮುಖಂಡರಿಂದ ಸಿದ್ದರಾಮಯ್ಯ ಭೇಟಿ title=

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜತೆಗೆ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲೂ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳ ಬೆನ್ನಲ್ಲೇ ಬಾದಾಮಿ ವಿಧಾನಸಭೆ ಕ್ಷೇತ್ರದ ನೂರಾರು ಮುಖಂಡರು ಇಂದು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್, ಬಾದಾಮಿಯ ಹಾಲಿ ಶಾಸಕ ಚಿಮ್ಮನಕಟ್ಟಿ ಅವರ ನೇತೃತ್ವದಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾದ ಮುಖಂಡರು, ನಿಮ್ಮ ಸ್ಪರ್ಧೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಹಾಗಾಗಿ ತಾವು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ಮನವಿ ಸಲ್ಲಿಸಿದರು.

ಬಾದಾಮಿ ವಿಧಾನಸಭೆ ಕ್ಷೇತ್ರದ ಮುಖಂಡರ ಜೊತೆ ಮಾತುಕತೆ ನಡೆಸಿದ ಸಿದ್ದರಾಮಯ್ಯ ನಿಮ್ಮ ಅಭಿಪ್ರಾಯಯವನ್ನು ಹೈಕಮಾಂಡ್ ಗೆ ತಿಳಿಸುವೆ ಎಂದರು.

Trending News