ಬೆಂಗಳೂರು: ಹೆಂಡತಿ ಸಾವಿನಿಂದ ಮನನೊಂದು ಗಂಡ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದ ಸಿದ್ದಗಂಗಾ ಶಾಲೆಯ ಸಮೀಪ ಘಟನೆ ನಡೆದಿದೆ.


COMMERCIAL BREAK
SCROLL TO CONTINUE READING

ಪತ್ನಿ (Wife) ಸಾವಿನಿಂದ ಮನನೊಂದು ಪತಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಜಯೇಂದ್ರ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.  


ಹೆಂಡತಿ ಲಾವಣ್ಯ ಬಹಳಷ್ಟು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ ಹೆಂಡತಿ ಲಾವಣ್ಯ ಮನೆಯಲ್ಲಿ ಮೃತಪಟ್ಟಿದ್ದಾರೆ.  


ಇದನ್ನೂ ಓದಿ: ಊರಿಗೆ ಊರೇ ಅನಾರೋಗ್ಯ ಪೀಡಿತ.. 114 ಮಂದಿಯಲ್ಲಿ 70 ಮಂದಿಗೆ ಚಳಿಜ್ವರ, ಹೆಚ್ಚಿದ ಆತಂಕ


ಹೆಂಡತಿ ಸಾವನ್ನು ಯಾರಿಗೂ ತಿಳಿಸಿದೇ ಮನನೊಂದಿದ್ದ ಪತಿ, ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಈ ಜೋಡಿ ಕಳೆದ 9 ವರ್ಷದ ಹಿಂದೆ ಮದುವೆಯಾಗಿದ್ದರು. 9 ವರ್ಷದ ಹಿಂದೆ ಮದುವೆ (Marriage) ಆಗಿದ್ದರೂ ಮಕ್ಕಳಿರಲಿಲ್ಲ. 


ಈ ಕುರಿತು ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.