ನಂಗೇನ್ ತಲೆ ಕೆಟ್ಟಿದೆಯಾ? ಲಕ್ಷ್ಮಿ ಹೆಬ್ಬಾಳ್ಕರ್ ಬಿಜೆಪಿ ಸೇರ್ಪಡೆ ಬಗ್ಗೆ ಬಿಎಸ್‌ವೈ ಕಿಡಿ

ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಬಿಜೆಪಿ ಸೇರಿಸಿಕೊಳ್ಳಲು ನಂಗೇನ್ ತಲೆ ಕೆಟ್ಟಿದೆಯಾ? ಎಂದು ಯಡಿಯೂರಪ್ಪ ಕಿಡಿ ಕಾರಿದ್ದಾರೆ.

Last Updated : Jul 14, 2019, 11:51 AM IST
ನಂಗೇನ್ ತಲೆ ಕೆಟ್ಟಿದೆಯಾ? ಲಕ್ಷ್ಮಿ ಹೆಬ್ಬಾಳ್ಕರ್ ಬಿಜೆಪಿ ಸೇರ್ಪಡೆ ಬಗ್ಗೆ ಬಿಎಸ್‌ವೈ ಕಿಡಿ title=

ಬೆಂಗಳೂರು: ಬೆಳಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್‌ಕರ್‌ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿಯನ್ನು ತಳ್ಳಿಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಲಕ್ಷ್ಮಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನಂಗೇನ್ ತಲೆ ಕೆಟ್ಟಿದೆಯಾ? ಎಂದು ಕಿಡಿ ಕಾರಿದ್ದಾರೆ.

ಮಾಧ್ಯಮಗಳಲ್ಲಿ ಲಕ್ಷ್ಮೀ ಹೆಬ್ಬಾಳ್‌ಕರ್‌ ಅವರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ಕುಟುಂಬದ ನಡುವೆ ಉತ್ತಮ ಸಂಬಂಧ ಇಲ್ಲದ ಕಾರಣ ಬೇಸತ್ತು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಪಕ್ಷದ ನಾಯಕರನ್ನು ಸಂಪರ್ಕಿಸಿದ್ದಾರೆ ಎಂದು ವರದಿಯಾಗಿತ್ತು. 

ಈ ಸುದ್ದಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು, "ಪಾಪ, ಲಕ್ಷ್ಮಿ ಹೆಬ್ಬಾಳ್ಕರ್ ನಮ್ಮನ್ನು ಸಂಪರ್ಕಿಸಿಯೂ ಇಲ್ಲ. ಅಷ್ಟಕ್ಕೂ ಅವರನ್ನು ಬಿಜೆಪಿ ಸೇರಿಸಿಕೊಳ್ಳಲು ನಂಗೇನ್ ತಲೆ ಕೆಟ್ಟಿದೆಯಾ? ಅವರಿಂದಲೇ ಎಲ್ಲಾ ಶಾಸಕರು ಮುಂಬೈಗೆ ಹೋಗಿರುವುದು ಎಂದು ಯಡಿಯೂರಪ್ಪ ಕಿಡಿ ಕಾರಿದ್ದಾರೆ.

Trending News