ಹುಬ್ಬಳ್ಳಿ : ಭಾರತೀಯ ಜನತಾ ಪಕ್ಷಕ್ಕೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಏನೇನು ಬೇಡಿಕೆ ಇಟ್ಟಿದ್ದಾರೋ ಗೊತ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.


COMMERCIAL BREAK
SCROLL TO CONTINUE READING

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ನಮ್ಮನ್ನೆಲ್ಲ ವಿಶ್ವಾಸಕ್ಕೆ ತೆಗೆದುಕೊಂಡೇ ಶೆಟ್ಟರ್ ರನ್ನ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಹೈಕಮಾಂಡ್  ಜಗದೀಶ ಶೆಟ್ಟರನ್ನು ಪಕ್ಷಕ್ಕೆ ಬರಮಾಡಿಕೊಂಡಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲಾ ಸ್ವಾಗತ ಮಾಡ್ತೇವೆ. ಜಗದೀಶ್ ಶೆಟ್ಟರ್ ಎಲ್ಲಿಂದ ಸ್ಪರ್ಧೆ ಮಾಡ್ತಾರೆ ಅದನ್ನ ವರಿಷ್ಠರು ತೀರ್ಮಾನ ಮಾಡ್ತಾರೆ. ಅದಕ್ಕೆ ನಾವು ಬದ್ದರಿದ್ದೇವೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಬರಬೇಕು ಅಂದ್ರೆ ರಾಜೀನಾಮೆ ಕೊಡಲೇ ಬೇಕು ಎಂದರು. 


ಇದನ್ನೂ ಓದಿ- ಮುಸ್ಲಿಮರ ಓಲೈಕೆ, ಹಿಂದೂಗಳ ಕಡೆಗಣನೆ ನೋಡಿ ಶೆಟ್ಟರ್ ʼಕೈʼ ಬಿಟ್ಟರು


ಹೈಕಮಾಂಡ್ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆಸುಕೊಂಡಿಲ್ಲ  ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾಲ್ಕು ಚೌಕಟ್ಟಿನ ನಡೆಯುವ ಸಂಧಾನ ಇದು. ಮಾತುಕತೆ ನಡೀತಾ ಇರುತ್ತೆ ಅವುಗಳನ್ನು ಬಹಿರಂಗ ಪಡಿಸಲಾಗೋದಿಲ್ಲ ಎಂದರು. 


ಇನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಜಗದೀಶ್ ಶೆಟ್ಟರ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುವ ಮುನ್ನ  ಭಾಗಿಯಾಗದ ಕುರಿತು ಮಾತನಾಡಿದ ಅವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡೆ ಪಕ್ಷ ನಿರ್ಧಾರ ಮಾಡಿರುತ್ತೆ ಎಂದಷ್ಟೇ ಹೇಳಿದರು. 


ಇದನ್ನೂ ಓದಿ- DK Shivakumar: ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರ್ಪಡೆ ಬಗ್ಗೆ ಡಿಸಿಎಂ ಡಿ‌ಕೆ ಶಿವಕುಮಾರ್ ಹೇಳಿದ್ದೇನು?


ತಮ್ಮ ಕುರಿತು ಶೆಟ್ಟರ್ ಅಸಮಾಧಾನ ವಿಚಾರ ಪಕ್ಷದಲ್ಲಿದ್ದಾಗ ಅಂತಹದ್ಯಾವುದು ಇರಲ್ಲ. ಕಾಂಗ್ರೆಸ್ ನಲ್ಲಿದ್ದಾಗ ಬಿಜೆಪಿ ಕಾಂಗ್ರೆಸ್ ಟೀಕೆ ಮಾಡೋದು ಸಹಜ. ಈಗ ಪಕ್ಷಕ್ಕೆ ಸೇರಿದ್ದಾರೆ ಎಲ್ಲರೂ ಕೂಡಿ ಇರ್ತೇವೆ. ಈಗ ನಾವೇನು ಹೇಳುವಂಥದಿಲ್ಲ, ಅವರನ್ನೇ ಕೇಳ್ಬೇಕು ಎಂದು ಹೇಳಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.