ನಾನು ಸಾಯುವವರೆಗೂ ಈ ರೀತಿ ಕೇಸ್‌ಗಳನ್ನು ಎದುರಿಸಬೇಕು!: ಡಿ.ಕೆ.ಶಿವಕುಮಾರ್

DK Sivakumar: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಯತ್ನಾಳ್ ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿ. ಅವರಿಗೂ ನ್ಯಾಯಾಲಯ, ನಮಗೂ ನ್ಯಾಯಾಲಯ ಇದೆ. ನಾನು ಸಾಯೋವರೆಗೂ ಈ ರೀತಿ ಕೇಸ್‌ಗಳನ್ನು ಎದುರಿಸಲೇಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. 

Written by - Puttaraj K Alur | Last Updated : Aug 29, 2024, 09:30 PM IST
  • ನಾನು ಸಾಯವವರೆಗೂ ಈ ರೀತಿ ಕೇಸ್‌ಗಳನ್ನು ಎದುರಿಸಲೇಬೇಕು
  • ನನ್ನ ಪರವಾಗಿ ನಿಂತ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆಂದ ಡಿಕೆಶಿ
  • ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ಗೂ ಈ ಪ್ರಕರಣಕ್ಕೂ ಏನು ಸಂಬಂಧ?
ನಾನು ಸಾಯುವವರೆಗೂ ಈ ರೀತಿ ಕೇಸ್‌ಗಳನ್ನು ಎದುರಿಸಬೇಕು!: ಡಿ.ಕೆ.ಶಿವಕುಮಾರ್ title=
ಅಕ್ರಮ ಆಸ್ತಿ ಗಳಿಕೆ ಪ್ರಕರಣ!

DK Sivakumar: ನಾನು ಸಾಯವವರೆಗೂ ಈ ರೀತಿ ಕೇಸ್‌ಗಳನ್ನು ಎದುರಿಸಲೇಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪಿನ ಹಿನ್ನೆಲೆ ಮಾತನಾಡಿದ ಅವರು, ʼನನ್ನ ಪರವಾಗಿ ನಿಂತ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆʼ ಎಂದು ಹೇಳಿದ್ದಾರೆ.

ನನ್ನ ಪರವಾಗಿ ಹೈಕೋರ್ಟ್‌ನಲ್ಲಿ ವಾದ ಮಾಡಿದ ವಕೀಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೂ ಈ ಪ್ರಕರಣಕ್ಕೂ ಏನು ಸಂಬಂಧ ಇದೆ? ಸಿಬಿಐನವರೇ ಈ ಪ್ರಕರಣದ ಬಗ್ಗೆ ಅಷ್ಟು ತಲೆಕೆಡಿಸಿಕೊಂಡಿಲ್ಲ ಅಂತಾ ಡಿಕೆಶಿ ತಿಳಿಸಿದರು.

ಇದನ್ನೂ ಓದಿ: ಹೀರೋ ಆಗಬೇಕಿದ್ದ ಪುತ್ರ ಆತ್ಮಹತ್ಯೆ; ಎಂಪಿ ಶಂಕರ್ ದುರಂತ ಅಂತ್ಯ ಹೇಗಾಯ್ತು?

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಯತ್ನಾಳ್ ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿ. ಅವರಿಗೂ ನ್ಯಾಯಾಲಯ, ನಮಗೂ ನ್ಯಾಯಾಲಯ ಇದೆ. ನಾನು ಸಾಯೋವರೆಗೂ ಈ ರೀತಿ ಕೇಸ್‌ಗಳನ್ನು ಎದುರಿಸಲೇಬೇಕು. ನಾವೆಲ್ಲಾ ಕಷ್ಟಪಟ್ಟು ರಾಜಕೀಯ ಮಾಡಿಕೊಂಡು ಬರುತ್ತಿರುವವರು.‌ ಬಿಜೆಪಿ ನಮ್ಮ ವಿರುದ್ಧ ಷಡ್ಯಂತ್ರ ಮಾಡುತ್ತಿದೆ. ಸಾವಿರಾರು ಕೇಸುಗಳಿವೆ, ‌ತನಿಖೆ ಮಾಡಲು ಅವಕಾಶವಿದೆ. ಅವರು ಲೋಕಾಯುಕ್ತಕ್ಕೆ ಕೊಟ್ಟು ಮಾಡಿಸಬಹುದಿತ್ತು. ನನ್ನ ವಿರುದ್ಧ ತರಾತುರಿಯಲ್ಲಿ ತನಿಖೆಗೆ ವಹಿಸುವ ಅವಶ್ಯಕತೆ ಇರಲಿಲ್ಲ ಎಂದು ಶಿವಕುಮಾರ್‌ ಹೇಳಿದರು. 

ಈ ಹಿಂದೆ ನನ್ನನ್ನು ಜೈಲಿಗೆ ಕಳುಹಿಸಿದ್ದರು. ಅವತ್ತು ಸಹ ನನಗೆ ನ್ಯಾಯ ಸಿಗುತ್ತೆ ಅಂತಾ ಹೇಳಿದ್ದೆ. ನನ್ನ ಮೇಲಿನ ಈ ಪ್ರಕರಣ ಕೂಡ ವಜಾ ಆಯ್ತು. ನಾನೇನೂ ತಪ್ಪು ಮಾಡಿಲ್ಲವೆಂದು ಅವತ್ತು ವಾದ ಮಾಡಿದ್ದೆ, ಇವತ್ತು ಮಾಡ್ತಾ ಇದ್ದೇನೆ. ಇವತ್ತಿನ ಜಯ ನನಗಿಂತ ಹೆಚ್ಚಾಗಿ ಕರ್ನಾಟಕ ಸರ್ಕಾರಕ್ಕೆ ಸಿಕ್ಕ ಜಯವಾಗಿದೆ. ನನ್ನ ಆಸ್ತಿ ಏನಿದೆ ಅಂತಾ ನನಗೆ ಗೊತ್ತಿದೆ. ಈ ಸಂಬಂಧ ನಾನು ದಾಖಲೆ ಕೊಟ್ಟಿದ್ದೇನೆ. ನಮಗೆ ತೊಂದರೆ ಕೊಡುವಂತಹ ಕೆಲಸ ನಡೆಯುತ್ತಿದೆ ಎಂದು ಡಿಕೆಶಿ ತಿಳಿಸಿದರು.  

ಇದನ್ನೂ ಓದಿ: ʼಅಂಥಹʼ ಕೆಲಸ ಮಾಡಿ ಅಭಿಷೇಕ್ ಬಚ್ಚನ್ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಐಶ್ವರ್ಯ..! ಇಲ್ಲಿಂದಲೇ ಶುರುವಾಗಿದ್ದಾ ಬಚ್ಚನ್ ಕುಟುಂಬದಲ್ಲಿ ಮನಸ್ತಾಪ?!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News