ಈ 5 ವರ್ಷ ಅಲ್ಲ, ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ

Siddaramaiah: ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಈ ಐದು ವರ್ಷ ಅವಧಿಗೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಮುಂದಿನ ಐದು ವರ್ಷದ ಅವಧಿಗೂ ನಾನೇ ಮುಂದುವರಿಯುತ್ತೇನೆ ಅಂತಾ ಹೇಳಿದ್ದಾರೆ.

Written by - Puttaraj K Alur | Last Updated : Mar 12, 2025, 09:25 PM IST
  • ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ
  • ಈ ಅವಧಿಯಲ್ಲ, ಮುಂದಿನ ಐದು ವರ್ಷದ ಅವಧಿಗೂ ನಾನೇ ಮುಂದುವರಿಯುತ್ತೇನೆ
  • ನಾಯಕತ್ವ ಬದಲಾವಣೆ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ
ಈ 5 ವರ್ಷ ಅಲ್ಲ, ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ title=
ಸಿಎಂ ಸಿದ್ದರಾಮಯ್ಯ

Siddaramaiah: ರಾಜ್ಯ ಕಾಂಗ್ರೆಸ್‌ನಲ್ಲಿ ಕಳೆದ ಆರು ತಿಂಗಳಿನಿಂದ ನಾಯಕತ್ವ ಬದಲಾವಣೆ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಲೇ ಇದೆ. ಮುಖ್ಯಮಂತ್ರಿ ಬದಲಾಗ್ತಾರೆ, ಡಿ.ಕೆ.ಶಿವಕುಮಾರ್‌ ಅವರು ಮುಂದಿನ ಮುಖ್ಯಮಂತ್ರಿ ಆಗ್ತಾರೆ ಈ ರೀತಿಯ ಚರ್ಚೆಗಳು ನಡೆಯುತ್ತಲೇ ಇವೆ. ಇದರ ಜೊತೆ ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಹುದ್ದೆಯ ಬದಲಾವಣೆ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಅನೇಕ ಸಚಿವರ ವ್ಯತಿರಿಕ್ತ ಹೇಳಿಕೆಗಳು ಉಹಾಪೋಹಗಳನ್ನ ಸೃಷ್ಠಿಸಿದ್ದವು.  

ಐದು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಇದರಲ್ಲಿ ಯಾವುದೇ ಸಂದೇಹವಿಲ್ಲ. ಸಿಎಂ ಕುರ್ಚಿ ಗಟ್ಟಿಯಾಗಿದೆ ಅಂತಾ ಸಚಿವ ಎಚ್‌.ಸಿ.ಮಹಾದೇವಪ್ಪ ಹೇಳಿದ್ದಾರೆ. ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಯಿಸಿದ್ದ ಸಿದ್ದರಾಮಯ್ಯನವರು, ಇದೆಲ್ಲಾ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಸ್ಪಷ್ಟನೆ ನೀಡಿದ್ದರು. ಇದೀಗ ಸ್ವತಃ ಸಿದ್ದರಾಮಯ್ಯನವರೇ ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೊಂದು ಮಹತ್ವ ಹೇಳಿಕೆ ನೀಡಿದ್ದಾರೆ.  

ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಬಂಧನ ಪ್ರಕರಣದ ವಿಚಾರಣೆ ಆರಂಭ!!

ಬರೀ ಈ 5 ವರ್ಷ ಅಲ್ಲ, ಮುಂದಿನ ಅವಧಿಯ ಐದು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿಯೇ ವಿಪಕ್ಷಗಳ ವಿರುದ್ಧ ಗುಡುಗಿರುವ ಸಿದ್ದರಾಮಯ್ಯನವರು, ನಾಯಕತ್ವ ಬದಲಾವಣೆ ವಿಚಾರವಾಗಿ ತಿರುಗೇಟು ನೀಡಿದ್ದಾರೆ. 

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವಾಗ ಮಾತನಾಡಿದ್ದ ವಿಪಕ್ಷ ನಾಯಕ ಆರ್.ಅಶೋಕ್‌, ʼಸಿದ್ದರಾಮಯ್ಯನವರು ಇನ್ನೆಷ್ಟು ದಿನ ಈ ಹುದ್ದೆಯಲ್ಲಿರುತ್ತಾರೋ ಗೊತ್ತಿಲ್ಲವೆಂದು ಉದ್ದೇಶಪೂರ್ವಕವಾಗಿ ಕಾಲೆಳೆದಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಈ ಐದು ವರ್ಷ ಅವಧಿಗೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಮುಂದಿನ ಐದು ವರ್ಷದ ಅವಧಿಗೂ ನಾನೇ ಮುಂದುವರಿಯುತ್ತೇನೆ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ಸುಗ್ರಿವಾಜ್ನೆ ಜಾರಿಯಾದ್ರೂ ನಿಲ್ಲದ ಮೈಕ್ರೋ ಫೈನಾನ್ಸ್‌ ಕಿರುಕುಳ!!

ಸಿದ್ದರಾಮಯ್ಯನವರ ಈ ಹೇಳಿಕೆ ಇದೀಗ ಕಾಂಗ್ರೆಸ್‌ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣ ಯಾವ ರೀತಿ ಪ್ರತಿಕ್ರಯಿಸಲಿದೆ ಅನ್ನೋದನ್ನ ಕಾದು ನೋಡಬೇಕಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

Trending News