ಬೆಂಗಳೂರು : ಸೆಮಿಕಂಡಕ್ಟರ್ ಉದ್ಯಮದ ಬೆಳವಣಿಗೆಗೆ ಗುಜರಾತ್ ರಾಜ್ಯಕ್ಕೆ ಕೊಟ್ಟಿರುವ ಹಾಗೆ ಶೇ 50ರಷ್ಟು ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುವುದಾದರೆ ರಾಜ್ಯ ಸರ್ಕಾರ ಕೂಡಾ ತನ್ನ ಪಾಲಿನ ಶೇ 20ರಷ್ಟು ಸಬ್ಸಿಡಿ ಕೊಡಲು ಸಿದ್ಧ ಇದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್  ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಗುಜರಾತಿನಲ್ಲಿ ನೆಲೆಯೂರಲಿರುವ ಅಮೆರಿಕಾದ ಮೈಕ್ರಾನ್ ಕಂಪನಿಗೆ ಕೇಂದ್ರ ಸರಕಾರವು ಶೇ 50ರಷ್ಟು ಸಬ್ಸಿಡಿ ಕೊಟ್ಟಿದೆ.ಇದರ ಜೊತೆಗೆ ಗುಜರಾತ್ ಸರ್ಕಾರ ಶೇ 20ರಷ್ಟು ಸಬ್ಸಿಡಿ ಕೊಟ್ಟಿದೆ.ಈ ರೀತಿ ಕರ್ನಾಟಕ ಸರ್ಕಾರ ಸಬ್ಸಿಡಿ ಕೊಡಲು ಸಿದ್ಧ ಇದೆಯಾ ಎನ್ನುವ ಕುಮಾರಸ್ವಾಮಿ ಪ್ರಶ್ನೆಗೆ ಎಂ ಬಿ ಪಾಟೀಲ್ ಉತ್ತರಿಸಿದ್ದಾರೆ. 


ಇದನ್ನೂ ಓದಿ : ಮಣ್ಣಿನ ಕಳ್ಳ‌ ರೆಡ್ಡಿ ರಾಜ್ಯದ ಜನತೆಯ ಕ್ಷಮೆಯಾಚಿಸಲಿ: ಸಚಿವ‌ ಶಿವರಾಜ್ ತಂಗಡಗಿ


ಇದಕ್ಕೆ 'ಎಕ್ಸ್' ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಪಾಟೀಲ್  'ಗುಜರಾತಿಗೆ ಕೊಟ್ಟ ಹಾಗೆ ಮೊದಲು ಸಬ್ಸಿಡಿ ಕೊಡಿ.ನಂತರ ರಾಜ್ಯದ ಪಾಲಿನ ಶೇ 20ರಷ್ಟು ಸಬ್ಸಿಡಿ ನೀಡುತ್ತೇವೆ.ಈ ಭರವಸೆಯಿಂದ‌ ಕುಮಾರಸ್ವಾಮಿ ಹಿಂದೆ‌ ಸರಿಯುವುದಿಲ್ಲ ಎನ್ನುವ ವಿಶ್ವಾಸ ಕೂಡಾ ಇದೆ‌'ಎಂದು ಎಂ ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.


ಯಾವುದೇ ಉದ್ದಿಮೆ ಇರಲಿ, ಕೇಂದ್ರ ಸರಕಾರವು ಎಲ್ಲ ರಾಜ್ಯಗಳಿಗೂ ಸಮಾನ ನೀತಿ ಅನುಸರಿಸಬೇಕು ಎನ್ನುವುದು ಕರ್ನಾಟಕದ ಪ್ರತಿಪಾದನೆಯಾಗಿದೆ. ಇದು ಸಹಜನ್ಯಾಯದ ತತ್ವವಾಗಿದ್ದು, ಇದನ್ನು ಕುಮಾರಸ್ವಾಮಿ ಅವರು ಅರ್ಥ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ :ರಾಜಧಾನಿ ನಿವಾಸಿಗಳಿಗೆ ಗುಡ್‌ ನ್ಯೂಸ್‌...! ಟ್ರಾಫಿಕ್‌ ಕಿರಿಕಿರಿಗೆ ಮುಕ್ತಿ, ಸುರಂಗ ರಸ್ತೆ ಸಂಚಾರಕ್ಕೆ ಡೇಟ್‌ ಫಿಕ್ಸ್‌ 


ರಾಜ್ಯ ಸರಕಾರವು ಉದ್ಯಮ ಸ್ನೇಹಿ ನೀತಿಗಳನ್ನು ಅನುಸರಿಸುತ್ತಿದೆ.ಆದರೆ ಕೇಂದ್ರ ಸರಕಾರವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರಣದಿಂದಾಗಿ ಗುಜರಾತ್ ಪರ ಧೋರಣೆ ತೋರಿಸುತ್ತಿದೆ. ನಾವು ಇದನ್ನಷ್ಟೇ ಪ್ರಶ್ನೆ ಮಾಡುತ್ತಿದ್ದೇವೆ ಎಂದು ಅವರು ವಿವರಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.