`ಹೈಕಮಾಂಡ್ ಸೂಚಿಸಿದ ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ..!'

ನಾಯಕತ್ವ ಬದಲಾಗಲಿದೆ ಎಂಬ ಕುರಿತು ಕೆಲವು ಸಚಿವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ  (BS Yediyurappa) , ನಾನು ಯಾರ ಬಗ್ಗೆಯೂ ಟೀಕೆ ಟಿಪ್ಪಣಿ ಮಾಡುವುದಿಲ್ಲ. ಹೈಕಮಾಂಡ್ ವಿಶ್ವಾಸ ಇರುವ ತನಕ ಮುಖ್ಯಮಂತ್ರಿಯಾಗಿ (Karnataka CM) ಮುಂದುವರಿಯುತ್ತೇನೆ ಎಂದಿದ್ದಾರೆ.  

Written by - Ranjitha R K | Last Updated : Jun 6, 2021, 11:49 AM IST
  • ವಿಧಾನಸೌಧದದಲ್ಲಿ ಯಡಿಯೂರಪ್ಪ ಸ್ಫೋಟಕ ಹೇಳಿಕೆ
  • ಹೈಕಮಾಂಡ್ ಹೇಳಿದಾಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ ಬಿಎಸ್‍ವೈ
  • ರಾಜಕೀಯ ಪಡಸಾಲೆಯಲ್ಲಿ ನಾಯಕತ್ವ ಬದಲಾವಣೆ ಸುದ್ದಿಗೆ ಬಂತು ರೆಕ್ಕೆ ಪುಕ್ಕ
`ಹೈಕಮಾಂಡ್ ಸೂಚಿಸಿದ ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ..!' title=
ವಿಧಾನಸೌಧದದಲ್ಲಿ ಯಡಿಯೂರಪ್ಪ ಸ್ಫೋಟಕ ಹೇಳಿಕೆ (file photo)

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ವಿಧಾನಸೌಧದಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದು, ಹೈಕಮಾಂಡ್ ಸೂಚಿಸಿದ ತಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.  ಬಿಜೆಪಿ ಹೈಕಮಾಂಡ್ (BJP high command)  ನನ್ನ ಮೇಲೆ ಸಂಪೂರ್ಣ ವಿಶ್ವಾಸ ಇಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಿ ಎಂದು ಹೇಳುತ್ತಾರೋ ಅಲ್ಲಿಯವರಿಗೆ ನಾನು ಅಧಿಕಾರದಲ್ಲಿ ಮುಂದುವರಿಯುತ್ತೇನೆ. ರಾಜೀನಾಮೆ ನೀಡುವಂತೆ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ.  ರಾಜೀನಾಮೆ ನೀಡಿ ರಾಜ್ಯದ ಅಭಿವೃದ್ದಿಗೆ ಕೆಲಸ ಮಾಡುತ್ತೇನೆ. ಪರ್ಯಾಯ ನಾಯಕ ಇಲ್ಲ ಎಂಬ ಮಾತನ್ನು ನಾನು ಒಪ್ಪಲ್ಲ. ರಾಜ್ಯ ಬಿಜೆಪಿಯಲ್ಲಿ ಪರ್ಯಾಯ ನಾಯಕರು ಇದ್ದಾರೆ ಎಂದು ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. 

`ನನ್ನಲ್ಲಿ ಯಾವುದೇ ಗೊಂದಲವಿಲ್ಲ' :
ನಾಯಕತ್ವ ಬದಲಾಗಲಿದೆ ಎಂಬ ಕುರಿತು ಕೆಲವು ಸಚಿವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ  (BS Yediyurappa) , ನಾನು ಯಾರ ಬಗ್ಗೆಯೂ ಟೀಕೆ ಟಿಪ್ಪಣಿ ಮಾಡುವುದಿಲ್ಲ. ಹೈಕಮಾಂಡ್ ವಿಶ್ವಾಸ ಇರುವ ತನಕ ಮುಖ್ಯಮಂತ್ರಿಯಾಗಿ (Karnataka CM) ಮುಂದುವರಿಯುತ್ತೇನೆ. ರಾಜೀನಾಮೆ ನೀಡಿ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಈ ವಿಚಾರದಲ್ಲಿ ನನ್ನಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದರು. 

ಇದನ್ನೂ ಓದಿ : COVID-19 Package : ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಖಾತೆಗೆ ₹ 3 ಸಾವಿರ ಹಣ ರಿಲೀಸ್!

ರಾಜ್ಯ ರಾಜಕೀಯದಲ್ಲಿ ಸಂಚಲನ :
ಯಡಿಯೂರಪ್ಪ (BSY) ಈ ಸ್ಫೋಟಕ ಹೇಳಿಕೆ ನಡುವೆ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಸುದ್ದಿಗಳಿಗೆ ರೆಕ್ಕೆ ಪುಕ್ಕ ಬಂದಿವೆ. ಬಿಜೆಪಿಯಲ್ಲಿ (BJP) ನಿಜವಾಗಿಯೂ ನಾಯಕತ್ವ ಬದಲಾವಣೆ ಆಗುತ್ತಾ ಎಂಬ ಪ್ರಶ್ನೆಗಳು ಸುಳಿದಾಡತೊಡಗಿವೆ. ನಾಯಕತ್ವ ಬದಲಾವಣೆ ಆಗುವುದಾದರೆ, ಪರ್ಯಾಯ ನಾಯಕರು ಯಾರು ಎನ್ನುವುದರ ಬಗ್ಗೆಯೂ ಊಹಾಪೋಹಗಳು ಹರಿಸಾಡುತ್ತಿವೆ.

ಇದನ್ನೂ ಓದಿ : Karnataka Lockdown Relaxation : ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಸುಳಿವು ನೀಡಿದ ಸಿಎಂ ಬಿಎಸ್‌ವೈ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News