ರಾಜ್ಯ ಸರ್ಕಾರಕ್ಕೆ ಆತ್ಮಸಾಕ್ಷಿ ಇದ್ದರೆ ಜಾರ್ಜ್-ಕುಲಕರ್ಣಿ ರಾಜೀನಾಮೆ ಪಡೆಯಲಿ- ಬಿಎಸ್ವೈ

           

Last Updated : Nov 27, 2017, 05:33 PM IST
ರಾಜ್ಯ ಸರ್ಕಾರಕ್ಕೆ ಆತ್ಮಸಾಕ್ಷಿ ಇದ್ದರೆ ಜಾರ್ಜ್-ಕುಲಕರ್ಣಿ ರಾಜೀನಾಮೆ ಪಡೆಯಲಿ- ಬಿಎಸ್ವೈ title=

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಆತ್ಮಸಾಕ್ಷಿ ಇದ್ದರೆ ಸಚಿವರಾದ ಕೆ.ಜೆ. ಜಾರ್ಜ್ ಮತ್ತು ವಿನಯ್ ಕುಲಕರ್ಣಿ ಅವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರದ ಧೋರಣೆಯನ್ನು ಖಂಡಿಸಿರುವ ಬಿಎಸ್ವೈ, ಇಂದು ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೇಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರಾದ ಯೋಗೀಶ್ ಗೌಡ ಹಾಗೂ ಡಿವೈಎಸ್ಪಿ ಗಣಪತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ವಿನಯ್ ಕುಲಕರ್ಣಿ ಮತ್ತು ಕೆ.ಜೆ.ಜಾರ್ಜ್ ಅವರ ರಕ್ಷಣೆಗೆ ಸರ್ಕಾರ ನಿಂತಿರುವುದು ನಾಚಿಕೆಗೇಡಿನ ಸಂಗತಿ. ಇವರ ರಾಜೀನಾಮೆ ಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದ್ದಾರೆ.

Trending News