ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರುವುದಾಗಿ ಕಾಂಗ್ರೆಸ್‍ನಿಂದ ಅಮಾನತುಗೊಂಡಿರುವ ಮಾಜಿ ಸಚಿವ, ಹಾಲಿ ಶಿವಾಜಿನಗರ ಶಾಸಕ ರೋಷನ್ ಬೇಗ್ ಸೋಮವಾರ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಕಹಿ ಸತ್ಯವನ್ನು ನುಡಿದಿದ್ದಕ್ಕೆ ಕಾಂಗ್ರೆಸ್ ಪಕ್ಷ ನನ್ನೊಂದಿಗೆ ನಡೆದುಕೊಂಡ ರೀತಿ ನನಗೆ ಬಹಳ ನೋವುಂಟು ಮಾಡಿದೆ. ಹಾಗಾಗಿ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಲಿದ್ದೇನೆ ಎಂದು ಶಾಸಕ ರೋಷನ್ ಬೇಗ್ ತಮ್ಮ ರಾಜೀನಾಮೆ ನಿರ್ಧಾರದ ಕಾರಣವನ್ನು ಸ್ಪಷ್ಟಪಡಿಸಿದ್ದಾರೆ.



ರಾಜ್ಯದಲ್ಲಿ ಕಾಂಗ್ರೆಸ್ ನಾಯಕತ್ವ ವಿಫಲವಾಗಿದೆ. ನಾನು ಮುಂಬೈ ಅಥವಾ ಗೋವಾಕ್ಕೆ ಹೋಗುತ್ತಿಲ್ಲ, ನಾನು ಬೆಂಗಳೂರಿನಲ್ಲಿಯೇ ಇರುತ್ತೇನೆ. ಆದರೆ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಬಿಜೆಪಿಯವರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ರೋಷನ್ ಬೇಗ್ ತಿಳಿಸಿದ್ದಾರೆ.