ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಬೆಂಗಳೂರಿನಲ್ಲಿ ತುಂತುರು ಮಳೆಯ ಜೊತೆಗೆ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


COMMERCIAL BREAK
SCROLL TO CONTINUE READING

ಇಂದು ಸಂಜೆಯ ಹೊತ್ತಿಗೆ ಚಳಿಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಇದೆ. ಚಳಿ ಜೊತೆಗೆ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಮಾಂಡಸ್ ಚಂಡಮಾರುತ ಕರ್ನಾಟಕ‌ ಮೂಲಕ ಅರಬ್ಬೀ ಸಮುದ್ರದ ಕಡೆ ಹೋಗುತ್ತೆದೆ. ಚಂಡಮಾರುತದ ಎಫೆಕ್ಟ್ ದಕ್ಷಿಣ ಜಿಲ್ಲೆಗಳ ಮೇಲೆ ಆಗಲಿದೆ. ಇಂದು ಮತ್ತು ನಾಳೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಮಳೆ, ಚಳಿ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ. 


ಇದನ್ನೂ ಓದಿ : Meteorological Department : ಮುಂದಿನ 48 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ..!


ತಮಿಳುನಾಡಿನಲ್ಲಿ ಮಾಂಡೋಸ್ ಚಂಡಮಾರುತ ಅಬ್ಬರ ಜೋರಾಗಿದೆ. ಈ ಸೈಕ್ಲೋನ್ ಎಫೆಕ್ಟ್  ಕರ್ನಾಟಕಕ್ಕೂ ತಟ್ಟಲಿದೆ.  ಇಂದು ಮತ್ತು ನಾಳೆ ಕರಾವಳಿಯ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ 6ಮಿ.ಮೀ ಮಳೆ ಸಾಧ್ಯತೆ ಇದೆ. ಚಾಮರಾಜನಗರ, ಬೆಂಗಳೂರು, ಕೋಲಾರ, ಮಂಡ್ಯ, ತುಮಕೂರು, ಚಿಕ್ಕಮಂಗಳೂರು, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.  


ಬೆಂಗಳೂರಿಗೆ ಸದ್ಯ ಶೀತಗಾಳಿ ಬರುವುದು ಅನುಮಾನವಾಗಿದೆ. ಬೆಂಗಳೂರಲ್ಲಿ 23 ರಿಂದ 22 ಡಿಗ್ರಿಗೆ ಉಷ್ಣಾಂಶ ಇಳಿಕೆಯಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಚಂಡಮಾರುತದ ಎಫೆಕ್ಟ್ ತಟ್ಟಲಿದೆ ಎಂದು ಹವಾಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ.


ಇದನ್ನೂ ಓದಿ : ಬುರ್ಖಾ ಧರಿಸಿ ಐಟಂ ಸಾಂಗ್ ಗೆ ಡ್ಯಾನ್ಸ್ , 4 ವಿದ್ಯಾರ್ಥಿಗಳು ಸಸ್ಪೆಂಡ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.