ಬೆಂಗಳೂರು : ಕೃಷಿ ಕಾನೂನು ವಿರೋಧಿಸಿ ರೈತರ ಪ್ರತಿಭಟನೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸಾಥ್ ಕೊಟ್ಟಿದೆ. ರೈತರೊಂದಿಗೆ ರಾಜಭವನ ಚಲೋ ಯಾತ್ರೆ ಕೂಡಾ ನಡೆಸಿದೆ. ಇದರ ವಿರುದ್ದ ರಾಜ್ಯ ಬಿಜೆಪಿ ಕೆಂಡಾಮಂಡಲವಾಗಿದ್ದು, ಕಾಂಗ್ರೆಸ್ ವಿರುದ್ಧ ಪ್ರಖರ ಟ್ವೀಟ್ ದಾಳಿ ನಡೆಸಿದೆ. ಜೊತೆಗೆ ಪ್ರಶ್ನೆಗಳನ್ನೂ ಕೇಳಿದೆ. ಕಾಂಗ್ರೆಸ್ ನೀತಿಯ ಬಗ್ಗೆ ವ್ಯಂಗ್ಯ ಮಾಡಿದೆ. 


COMMERCIAL BREAK
SCROLL TO CONTINUE READING

ಇವತ್ತು ಚಿನ್ನದ ತಟ್ಟೆಯಲ್ಲಿ ಊಟ ಮಾಡುವಿರಾ..?
ಅಂದು ಹಸಿರು ಶಾಲು ಹಾಕಿಕೊಂಡು ತಾವು ರೈತಪರ ಎಂದು ಬೊಗಳೆಬಿಟ್ಟ ಕಾಂಗ್ರೆಸ್ (Congress) ನಾಯಕರು,  ಬೆಳ್ಳಿ ತಟ್ಟೆಯಲ್ಲಿ ಊಟ ಮಾಡಿದ್ದರು. ಇವತ್ತು ಚಿನ್ನದ ತಟ್ಟೆಯಲ್ಲಿ ಊಟ ಮಾಡುವಿರಾ !!? ಎಂದು ಬಿಜೆಪಿ (BJP) ವ್ಯಂಗ್ಯವಾಡಿದೆ. 


ಗಮನಿಸಿ.! ಇವತ್ತು ವಿಧಾನಸೌಧ, ಮೆಜೆಸ್ಟಿಕ್, ಸಿಟಿ ರೈಲ್ವೆ ಸ್ಡೇಷನ್, ಫ್ರೀಡಂಪಾರ್ಕ್ ಕಡೆ ಹೋಗಬೇಡಿ…!


ಇದು ಕಾಂಗ್ರೆಸ್ ಅಸ್ತಿತ್ವದ ಹೋರಾಟ, ರೈತಪರ ಹೋರಾಟ ಅಲ್ಲ:
ಸರಣಿ ಟ್ವಿಟ್ ಮುಂದುವರಿಸಿರುವ ಬಿಜೆಪಿ, ಧಾರವಾಡದ ನವಲಗುಂದ ತಾಲೂಕಿನ ಯಮನೂರು ರೈತರ (Farmers) ಮೇಲೆ ಯಮನಂತೆ ಎರಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಲು ಕಾಂಗ್ರೆಸ್  ಕುಮ್ಮಕ್ಕು ನೀಡಿತ್ತು.ಅದೇ ರೈತ ವಿರೋಧಿ ಕಾಂಗ್ರೆಸ್ ಇಂದು ಬೂಟಾಟಿಕೆ ಪ್ರದರ್ಶನ ಮಾಡುತ್ತಿದೆ. ರಾಜಭವನ ಚಲೋ ಎಂಬುದು ಕಾಂಗ್ರೆಸ್‌ ಅಸ್ತಿತ್ವದ ಹೋರಾಟವೇ ಹೊರತು ರೈತಪರ ಹೋರಾಟವಲ್ಲ ಎಂದು ಲೇವಡಿ ಮಾಡಿದೆ. 


Suresh Angadi: ಶಾ ಭೇಟಿ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಬೈಎಲೆಕ್ಷನ್‌ ಟಿಕೆಟ್ ಇವರಿಗೆ ಫಿಕ್ಸ್..!?


"ನಾಟಕ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ?" :
ನಿಮ್ಮ ದುರಾಡಳಿತದಲ್ಲಿ ರೈತ ವಿಠಲ ಅರಭಾವಿ ಆತ್ಮಹತ್ಯೆಯ ಮಾಡಿಕೊಂಡಾಗ, ʼರೈತನ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಚೆನ್ನಾಗಿ ಕುಡಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆʼ ಎಂದು ಹೇಳಿದ್ದಿರಿ. ಈಗ ರಾಜಭವನ (Rajabhavana) ಚಲೋ ಎಂಬ ನಾಟಕ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. 


https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.