ಬೆಂಗಳೂರು: ಇತ್ತೀಚೆಗಷ್ಟೇ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದ ಪಕ್ಷೇತರ ಶಾಸಕ ಹೆಚ್. ನಾಗೇಶ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ವಾಜುಭಾಯ್ ವಾಲಾ ಅವರಿಗೆ ಸಲ್ಲಿಸಿದ್ದಾರೆ.



COMMERCIAL BREAK
SCROLL TO CONTINUE READING

ಕೆಲದಿನಗಳ ಹಿಂದೆಯಷ್ಟೇ ಸಣ್ಣ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಪಕ್ಷೇತರ ಶಾಸಕ ಹೆಚ್. ನಾಗೇಶ್ ಅವರ ರಾಜೀನಾಮೆ ನಿರ್ಧಾರ ದೋಸ್ತಿ ಸರ್ಕಾರಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.


ಬಿಜೆಪಿ ಬೆಂಬಲಿಸಲು ಸಿದ್ಧ ಎಂದ ನಾಗೇಶ್:
ರಾಜ್ಯಪಾಲ ವಾಜುಭಾಯ್ ವಾಲಾ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ನಾಗೇಶ್, ಹೆಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರಕ್ಕೆ ನಾನು ಈಗಾಗಲೇ ನನ್ನ ಬೆಂಬಲವನ್ನು ಹಿಂತೆಗೆದುಕೊಂಡಿದ್ದೇನೆ.  ಕರೆ ಬಂದರೆ ನಾನು ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲವನ್ನು ನೀಡುತ್ತೇನೆ ಎಂಬುದನ್ನು ಈ ಪತ್ರದ ಮೂಲಕ ನಾನು ನಿಸ್ಸಂದಿಗ್ಧವಾಗಿ ಹೇಳುತ್ತೇನೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.



ರಾಜೀನಾಮೆ ಬಳಿಕ ನಾಗೇಶ್ ಕೂಡ ಮುಂಬೈಗೆ ತೆರಳಲಿದ್ದಾರೆ ಎನ್ನಲಾಗುತ್ತಿದ್ದು, ನಾಗೇಶ್​ಗೆ ಮುಂಬೈನ ಸೋಪಿಟೆಲ್ ಹೋಟೆಲ್ನಲ್ಲಿ ಈಗಾಗಲೇ ರೂಂ ಬುಕ್ ಮಾಡಲಾಗಿದೆ ಎಂಬ ಮಾಹಿತಿಗಳು ಕೂಡ ಲಭ್ಯವಾಗಿವೆ.