ಹುಬ್ಬಳ್ಳಿ: ಮಾತೆತ್ತಿದರೆ ಅಹಿಂದ, ದಲಿತ ಪರ ಎನ್ನುವ ಕಾಂಗ್ರೆಸ್ ಸರ್ಕಾರವೇ ಈಗ ಒಬಿಸಿಯಲ್ಲಿ ದಲಿತರಿಗಿದ್ದ ಮೀಸಲಾತಿ ಕಿತ್ತುಕೊಂಡು ಮುಸ್ಲಿಂರಿಗೆ ಕೊಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Union Minister Pralhad Joshi), ರಾಜ್ಯದಲ್ಲಿ ಮುಸ್ಲಿಂ ಓಲೈಕೆಗಾಗಿ ದಲಿತರಿಗೆ ಹೀಗೆ ಅನ್ಯಾಯ (Injustice to Dalits for Muslim favor) ಮಾಡುತ್ತಿದ್ದಾರೆ. ಅಂಬೇಡ್ಕರ್, ಬಾಬು ಜಗಜೀವನ ರಾಮ್ ಅವರಿಗೆ ಅವಮಾನ ಮಾಡಿದ್ದು, ಅವಕಾಶವಾದಿ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಇದೇ ವೇಳೆ. ಕಾಂಗ್ರೆಸ್ನವರೇ ಹೀಗೆ ಡಬಲ್ ಸ್ಟ್ಯಾಂಡ್ ತೆಗೆದುಕೊಳ್ಳುತ್ತಿದ್ದಾರೆ ನಾವಲ್ಲ ಎಂದು ಸ್ಪಷ್ಟಪಡಿಸಿದರು.


ಕರ್ನಾಟಕಕ್ಕೆ ವಸೂಲಿಗೆ ಬರ್ತಾರೆ: 
ಕಾಂಗ್ರೆಸ್ ನಾಯಕರು (Congress Leaders) ಕರ್ನಾಟಕಕ್ಕೆ ವಸೂಲಿಗೆ ಬರುತ್ತಾರೆ ಅಷ್ಟೇ. ಪ್ರಧಾನಿ ಮೋದಿ ಅವರ ಬಗ್ಗೆ, ಬಿಜೆಪಿ ಬಗ್ಗೆ ಮಾತನಾಡುವ ಯೋಗ್ಯತೆ ಇವರಿಗಿಲ್ಲ ಎಂದು ಜೋಶಿ ತಿರುಗೇಟು ನೀಡಿದರು.


ಇದನ್ನೂ ಓದಿ- ಸನಾತನ ಹಿಂದೂ ಧರ್ಮದ ಉಳಿವಿಗೆ ಮತ್ತೆ ಮೋದಿ ಬೆಂಬಲಿಸಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆ


ಕರ್ನಾಟಕ, ತೆಲಂಗಾಣ ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಹಿಮಾಚಲ ಪ್ರದೇಶದಲ್ಲಿ ಅವರ ಸರ್ಕಾರ ತೇಲಾಡುತ್ತಿದೆ. ದೇಶದ ಜನ ಕಾಂಗ್ರೆಸ್ಸಿಗರ ಡಬಲ್ ಸ್ಟ್ಯಾಂಡ್ ಅನ್ನು ನೋಡಿ ಬಿಟ್ಟಿದ್ದಾರೆ. ಹಾಗಾಗಿ ಈ ಸ್ಥಿತಿಗೆ ತಂದಿದ್ದಾರೆ ಎಂದು ಲೇವಡಿ ಮಾಡಿದರು.


ದೇಶದಲ್ಲಿ 230 ಕ್ಷೇತ್ರಗಳಿಗೆ ಸ್ಪರ್ಧಿಸಿದ್ದಾರೆ. ಅಧಿಕಾರಕ್ಕೆ ಬರುವಷ್ಟು ಸ್ಥಾನಗಳಿಗೂ ಸ್ಪರ್ಧಿಸದ ಇವರು ಬಿಜೆಪಿ, ಮೋದಿ ಬಗ್ಗೆ ಮಾತಾಡುತ್ತಾರೆ. ಇದು ಅವರ ಹತಾಶೆಯನ್ನು ತೋರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು. 


ಅವರ ಡಿಎನ್ಎ ಬಗ್ಗೆ ದೇಶದ ಜನಕ್ಕೆ ಗೊತ್ತಿದೆ ಎಂದು ಕಾಂಗ್ರೆಸ್ ಗೆ ತಿರುಗೇಟು ಕೊಟ್ಟ ಜೋಶಿ, ಪ್ರಧಾನಿ ನರೇಂದ್ರ ಮೋದಿ ದೇಶ ಪರಿವರ್ತನೆಯ ನಾಯಕ ಎಂಬುದನ್ನು ಜನ ನಂಬಿದ್ದಾರೆ ಎಂದು ಹೇಳಿದರು.


ಇದನ್ನೂ ಓದಿ- "ಕನಿಷ್ಠ ಜ್ಞಾನ ಒಬ್ಬ ಪ್ರಧಾನಮಂತ್ರಿಗೆ ಇಲ್ಲದಿರುವುದು ಈ ದೇಶದ ದುರಂತ"-ಸಿಎಂ ಸಿದ್ದರಾಮಯ್ಯ


ಬಿಜೆಪಿ 400 ಸ್ಥಾನ ಗೆಲ್ಲುವ ವಿಶ್ವಾಸ: 
ದೇಶದಲ್ಲಿನ ಎಲ್ಲ ಸರ್ವೆಗಳಲ್ಲಿ ಬಿಜೆಪಿ 370, 380 ಗೆಲ್ಲುತ್ತದೆ ಎಂಬ ವರದಿ ಇದೆ. ಆದರೆ, ನಾವು 400 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.