ಬೆಂಗಳೂರು: 147 ನೇ ದಿನಕ್ಕೆ ಕಾಲಿಟ್ಟಿರುವ ಸರ್ಕಾರಿ ಸರ್ಕಾರಿ ಅನುದಾನಿತ ನಿಶ್ಚಿತ ಪಿಂಚಣಿ ಹೋರಾಟ ಈಗ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ.


COMMERCIAL BREAK
SCROLL TO CONTINUE READING

ಕಳೆದ ಹಲವು ದಿನಗಳಿಂದ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದುವರೆದಿದ್ದು,ಈಗ ನೌಕರರರು ಅರೆಬೆತ್ತಲೆ ಮೂಲಕ ಪ್ರತಿಭಟನೆಗೆ ಮುಂದಾಗಿದ್ದಾರೆ.


ಇದನ್ನೂ ಓದಿ: ಬೆಂಗಳೂರಿನ 28 ಕ್ಷೇತ್ರಗಳಲ್ಲಿ 20 ಕ್ಷೇತ್ರ ಗೆಲ್ಲಲು ಬಿಜೆಪಿ ಭರ್ಜರಿ ಪ್ಲ್ಯಾನ್‌


ಪಿಂಚಣಿ ನೀಡದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿರುವ ನೌಕರರು ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲು ಆಗ್ರಹಿಸಿದ್ದಾರೆ.ಪಿಂಚಣಿ ನೀಡದ ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಿರುವ ಅನುದಾನಿತ ಶಾಲಾ, ಕಾಲೇಜು ನೌಕರರು 01/04/2006ರ ಪೂರ್ವದಲ್ಲಿ ನೇಮಕವಾದ ನೌಕರರಿಗೂ ಪಿಂಚಣಿ ಸೌಲಭ್ಯ ಒದಗಿಸಲು ಪಟ್ಟು ಹಿಡಿದ್ದಿದ್ದಾರೆ.


ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದ ಆರೋಪಿಗೆ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ ಸಿಎಂಎಂ ನ್ಯಾಯಾಲಯ


ಪ್ರತಿಭಟನೆಯನ್ನು ತೀವ್ರಗೊಳಿಸಿದ ನೌಕರರು ಸಿಎಂ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಬಿಎಂಟಿಸಿ ಬಸ್ ಗಳಲ್ಲಿ ಕರೆದೊಯ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.