“ಮಾನನಷ್ಟ ಮೊಕದ್ದಮೆ ಕಾನೂನು ಕೇವಲ ಬಿಜೆಪಿಗೆ ಮಾತ್ರ ಸೀಮಿತವೇ?”

ದೇಶದಲ್ಲಿ ಮಾನನಷ್ಟ ಮೊಕದ್ದಮೆ ದಾಖಲು ಮಾಡುವ ಕಾನೂನು ಕೇವಲ ಬಿಜೆಪಿ ಹಾಗೂ ಅದರ ನಾಯಕರಿಗೆ ಮಾತ್ರ ಸೀಮಿತವೇ? ಅಥವಾ ಬೇರೆಯವರಿಗೂ ಅನ್ವಯವಾಗುತ್ತದೆಯೇ? ರಾಜಕಾರಣದಲ್ಲಿ ಟೀಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು. ಗಾಜಿನ ಮನೆಯಲ್ಲಿ ನಿಂತು ಬೇರೆಯವರ ಮನೆಗೆ ಕಲ್ಲು ಹೊಡೆಯಬಾರದು. ಅವರು ಇದೇ ಕೆಲಸ ಮಾಡಿಕೊಂಡು ಬಂದಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ವಾಗ್ದಾಳಿ ನಡೆಸಿದ್ದಾರೆ.

Written by - Zee Kannada News Desk | Last Updated : Jan 13, 2023, 05:21 PM IST
  • ದೇಶದಲ್ಲಿ ಮಾನನಷ್ಟ ಮೊಕದ್ದಮೆ ದಾಖಲು ಮಾಡುವ ಕಾನೂನು ಕೇವಲ ಬಿಜೆಪಿ ಹಾಗೂ ಅದರ ನಾಯಕರಿಗೆ ಮಾತ್ರ ಸೀಮಿತವೇ?
  • ಅಥವಾ ಬೇರೆಯವರಿಗೂ ಅನ್ವಯವಾಗುತ್ತದೆಯೇ?
  • ರಾಜಕಾರಣದಲ್ಲಿ ಟೀಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು.
“ಮಾನನಷ್ಟ ಮೊಕದ್ದಮೆ ಕಾನೂನು ಕೇವಲ ಬಿಜೆಪಿಗೆ ಮಾತ್ರ ಸೀಮಿತವೇ?” title=
file photo

ಬೆಂಗಳೂರು: ದೇಶದಲ್ಲಿ ಮಾನನಷ್ಟ ಮೊಕದ್ದಮೆ ದಾಖಲು ಮಾಡುವ ಕಾನೂನು ಕೇವಲ ಬಿಜೆಪಿ ಹಾಗೂ ಅದರ ನಾಯಕರಿಗೆ ಮಾತ್ರ ಸೀಮಿತವೇ? ಅಥವಾ ಬೇರೆಯವರಿಗೂ ಅನ್ವಯವಾಗುತ್ತದೆಯೇ? ರಾಜಕಾರಣದಲ್ಲಿ ಟೀಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು. ಗಾಜಿನ ಮನೆಯಲ್ಲಿ ನಿಂತು ಬೇರೆಯವರ ಮನೆಗೆ ಕಲ್ಲು ಹೊಡೆಯಬಾರದು. ಅವರು ಇದೇ ಕೆಲಸ ಮಾಡಿಕೊಂಡು ಬಂದಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ವಾಗ್ದಾಳಿ ನಡೆಸಿದ್ದಾರೆ.

ಅರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ನಾಲ್ಕು ಬಾರಿ ಸೋತಿದ್ದು, ಈಗ ನಾಲ್ಕು ಬಾರಿ ಗೆಲುವು ಸಾಧಿಸಿದ್ದಾರೆ. ಸಂಘ ಪರಿವಾರದ ಹಿನ್ನೆಲೆಯಿಂದ ರಾಜಕೀಯಕ್ಕೆ ಬಂದ ಅರಗ ಜ್ಞಾನೇಂದ್ರ ಅವರು ತಾವು ಗಣೇಶ್ ಭಟ್ ಎಂಬುವವರಿಂದ ನೈತಿಕತೆ ಕಲಿತಿದ್ದೇನೆ, ನಾನು ಸಂಗ ಪರಿವಾರದ ನೈತಿಕತೆಯನ್ನು ಪಾಲನೆ ಮಾಡುತ್ತೇನೆ ಎಂದು ಆಗಾಗ್ಗೆ ಹೇಳುತ್ತಿರುತ್ತಾರೆ.

ಅರಗ ಜ್ಞಾನೆಂದ್ರ ಅವರು ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದ ಕಿಮ್ಮನೆ ರತ್ನಾಕರ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ರಾಜ್ಯದಲ್ಲಿ ಸಜ್ಜನ ರಾಜಕಾರಣ ಮಾಡುವವರನ್ನು ಹುಡುಕಿದರೆ ನಮಗೆ ಸಿಗುವ ಕೆಲವೇ ಕೆಲವು ನಾಯಕರಲ್ಲಿ ಕಿಮ್ಮನೆ ರತ್ನಾಕರವರ ಕೂಡ ಒಬ್ಬರು. ಕಾಂಗ್ರೆಸ್ ಪಕ್ಷದ ಗೆ ಉದ್ದೇಶಗಳು ಹಾಗೂ ಕಿಮ್ಮನೆ ರತ್ನಾಕರ ಅವರನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದೇ ಇರುವುದರಿಂದ ಅರಗ ಜ್ಞಾನೇಂದ್ರ ಅವರು ರಾಜಕೀಯ ಸಿದ್ಧಾಂತ ರೂಪಿಸಲು ಮುಂದಾಗಿದ್ದಾರೆ.

ಪಿಎಸ್ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ದಿವ್ಯ ಹಾಗರಗಿ, ಸ್ಯಾಂಟ್ರೋ ರವಿ ಅವರ ಜೊತೆ ಸೇರಿ ವರ್ಗಾವಣೆ ದಂದೆ ಮಾಡಿರುವ ಆರೋಪ ಹೊತ್ತಿರುವ ಅರಗ ಜ್ಞಾನೇಂದ್ರ ಅವರು ಈಗ ಕಿಮ್ಮನೆ ರತ್ನಾಕರ ಅವರ ಹೆಸರಿಗೆ ಮಸಿ ಬಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕಾಮಗಾರಿಗಳಿಗೆ ಲಂಚ..‌ ಪಂಚಾಯ್ತಿ ಮುಂದೆ ಭಿಕ್ಷಾಪಾತ್ರೆ ಹಿಡಿದು ಕುಳಿತ ಗ್ರಾಪಂ ಸದಸ್ಯ

ನಾನಿಂದು ಅರಗ ಜ್ಞಾನೇಂದ್ರ ಅವರ  ರಾಜೀನಾಮೆಗೆ ಅಗ್ರಹಿಸುವುದಿಲ್ಲ. ಅವರು ನೈತಿಕತೆ ಇಟ್ಟುಕೊಂಡು ರಾಜಕಾರಣ ಮಾಡಿದ್ದರೆ ಅವರು ರಾಜೀನಾಮೆ ನೀಡುತ್ತಿದ್ದರು. ಆದರೆ ಅವರು ನೈತಿಕತೆ ಕಳೆದುಕೊಂಡಿದ್ದು, ಮಾನ್ಯ ಮುಖ್ಯಮಂತ್ರಿಗಳಿಗೆ ಸ್ವಲ್ಪವಾದರೂ ನೈತಿಕತೆ, ಉಳಿದಿದ್ದರೆ ಅವರು ಕೂಡಲೇ ಅರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ವಜಾ ಗೊಳಿಸಬೇಕು ಎಂದು ಕೇಳುತ್ತೇನೆ.

ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನದಿಂದ ಇಲ್ಲಿಯವರೆಗೂ ಒಂದಲ್ಲ ಒಂದು ರೀತಿಯ ಹಗರಣಗಳನ್ನು ಮಾಡಿಕೊಂಡು ಬಂದಿದ್ದಾರೆ.

ಆರಂಭದಲ್ಲಿ ಪೊಲೀಸರನ್ನು ನಿಂದಿಸಿ ಅವರ ನೈತಿಕ ಸ್ಥೈರ್ಯವನ್ನು ಕುಗ್ಗಿಸಿದರು. ಪಿ ಎಸ್ ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ದಿವ್ಯ ಹಾಗರಗಿ ಅವರ ನಿವಾಸಕ್ಕೆ ಭೇಟಿ ನೀಡಿ ಈ ಅಕ್ರಮ ನಡೆಸಲು ಎಲ್ಲಾ ರೀತಿಯ ಸಹಕಾರವನ್ನು ನೀಡಿದ್ದಾರೆ.

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಇಂತಹ ಹಗರಣದಲ್ಲಿ ಸಿಲುಕಿ ಅಮಾನತುಗೊಂಡಿರುವ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಅರಗ ಜ್ಞಾನೇಂದ್ರ ಅವರೇ ಕಾರಣ.

ನಂತರ ಜೆಜಿ ನಗರದಲ್ಲಿ ನಡೆದ ಸಣ್ಣ ಗಲಭೆಗೆ ಕೋಮು ಗಲಭೆಯ ಬಣ್ಣವನ್ನು ನೀಡುವ ಪ್ರಯತ್ನ ಮಾಡಿದರು. ಆಗಿನ ಪೊಲೀಸ್ ಆಯುಕ್ತರು ಇದು ಸ್ಥಳೀಯವಾಗಿ ನಡೆದಿರುವ ಗಲಾಟೆ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದರು, ಅವರಿಗಿಂತ ಮುಂಚಿತವಾಗಿ ಗೃಹ ಸಚಿವರು ಇದು ಸಮುದಾಯಗಳ ನಡುವಿನ ಕೋಮುಗಲಭೆ ಎಂದು ಹೇಳಿಕೆ ನೀಡಿದ್ದರು.

ಇಷ್ಟೆಲ್ಲಾ ಆರೋಪ ಹೊತ್ತಿರುವ ಗೃಹ ಸಚಿವರು ಈಗ ಮಂಗಳೂರು ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಮ್ಮನೆ ರತ್ನಾಕರವರ ಪಾತ್ರವಿದೆ ಹೀಗಾಗಿ ಎನ್ಐಎ ಅಧಿಕಾರಿಗಳು ಕಿಮ್ಮನೆ ರತ್ನಾಕರ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ ಎಂಬ ಆರೋಪದ ಸುದ್ದಿಗಳನ್ನು ಹರಡುವ ಪ್ರಯತ್ನ ಮಾಡಿದ್ದಾರೆ.

ಸಂಘ ಪರಿವಾರದಿಂದ ಬಂದಿರುವ ಅರಗ ಜ್ಞಾನೇಂದ್ರ ಅವರು ಕೆಲವು ಮೌಲ್ಯಗಳನ್ನು ಪ್ರತಿಪಾದನೆ ಮಾಡುತ್ತಿದ್ದಾರೆ ಎಂದು ಅವರ ಮೇಲೆ ಗೌರವವನ್ನು ಇಟ್ಟುಕೊಂಡಿದ್ದೆ. ಆದರೆ ಅವರು ಜನರಿಗೆ ವಿರೋಧವಾಗಿ ರಾಜ್ಯದಲ್ಲಿ ಹಲವು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಈ ರಾಜ್ಯದಲ್ಲಿ ಮಹಿಳೆಯರು, ದಲಿತರು, ಜನಸಾಮಾನ್ಯರ ಮೇಲಿನ ದೌರ್ಜನ್ಯ ಪ್ರತಿನಿತ್ಯ ಹೆಚ್ಚಾಗಿದ್ದು, ರಾಜ್ಯದಲ್ಲಿ ರೌಡಿಗಳು ಹಾಗೂ ಗೂಂಡಾಗಳು ವಿಜೃಂಭಿಸುತ್ತಿದ್ದಾರೆ. ಸಮಾಜದಲ್ಲಿ ಕೊಲೆಗಳು ಹೆಚ್ಚಾಗುತ್ತಿವೆ. ಹೀಗೆ ಗೃಹ ಸಚಿವರಾಗಿ ಅರಗ ಜ್ಞಾನೇಂದ್ರ ಅವರು ಸಂಪೂರ್ಣ ವೈಫಲ್ಯವನ್ನು ಅನುಭವಿಸಿದ್ದಾರೆ. ಅವರು ತಮ್ಮ ಈ ವೈಫಲ್ಯವನ್ನು ಒಪ್ಪಿಕೊಳ್ಳಬೇಕಾಗಿದೆ.

ಇದನ್ನೂ ಓದಿ: CM Basavaraj Bommai: ಕೆಟ್ಟ ಸಂಸ್ಕೃತಿ ರಾಜಕಾರಣಕ್ಕೆ ಪ್ರವೇಶಿಸಲು ಕಾಂಗ್ರೆಸ್ ಮಹಾದ್ವಾರ: ಸಿಎಂ ಬೊಮ್ಮಾಯಿ

ಅರಗ ಜ್ಞಾನೇಂದ್ರ ಅವರು ತಮ್ಮ ಕ್ಷೇತ್ರದಲ್ಲೂ ಇಂತಹ ಅವಾಂತರಗಳಿಗೆ ಅವಕಾಶ ನೀಡಿದ್ದಾರೆ. 2018ರಲ್ಲಿ ಲಿಸ್ಟ್ ಮೂಲಕ ಕಾಂಗ್ರೆಸ್ ಪಕ್ಷ ಆ ಕಚೇರಿಯನ್ನು ಬಾಡಿಗೆ ಪಡೆದಿದ್ದು, ಅದು ಬಾಂಬ್ ಬ್ಲಾಸ್ಟ್ ಆರೋಪಿಯ ಕುಟುಂಬಕ್ಕೆ ಸೇರಿದ ಆಸ್ತಿ ಎಂಬ ನೆಪವನ್ನು ಇಟ್ಟುಕೊಂಡು ಕಿಮ್ಮನೆ ರತ್ನಾಕರ ಅವರ ಮನೆ ಮೇಲೆ ಎನ್ನಯ್ಯ ದಾಳಿ ನಡೆಸಿದೆ ಎಂಬ ರೀತಿಯಲ್ಲಿ ವ್ಯವಸ್ಥಿತವಾದ ಸುಳ್ಳು ಪ್ರಚಾರವನ್ನು ಮಾಡಿದ್ದಾರೆ.

ತೀರ್ಥಹಳ್ಳಿಯಲ್ಲಿ ಅರಗ ಜ್ಞಾನೇಂದ್ರ ಅವರು ಕ್ಷೇತ್ರದ ಸಂಪೂರ್ಣ ಅಧಿಕಾರವನ್ನು ತಮ್ಮ ಮಗನಿಗೆ ನೀಡಿದ್ದು, ಅಲ್ಲಿ ರಿಯಲ್ ಎಸ್ಟೇಟ್ ಹಾಗೂ ಮರಳು ದಂಧೆಗಳು ಹೆಚ್ಚಾಗಿ ನಡೆಯುತ್ತಿವೆ. ತಮ್ಮ ಅಳಿಯನನ್ನು ಬಳಸಿಕೊಂಡು ಕ್ಷೇತ್ರದಲ್ಲಿ ರಿಯಲ್ ಎಸ್ಟೇಟ್ ಲಾಭಿಗಳನ್ನು ಮಾಡುತ್ತಿದ್ದಾರೆ.

ಚುನಾವಣೆಗೆ ಕೆಲವೇ ಕೆಲವು ದಿನಗಳು ಬಾಕಿ ಇರುವ ಸಮಯದಲ್ಲಿ ಸಜ್ಜನ ರಾಜಕಾರಣಿ ಕಿಮ್ಮನೆ ರತ್ನಾಕರ ಅವರಿಗೆ ಮಸಿ ಬಳೆಯುವಂತಹ ಪ್ರಯತ್ನ ಮಾಡುತ್ತಿದ್ದಾರೆ. ಅರಗ ಜ್ಞಾನೇಂದ್ರ ಅವರು 1983, 85 ಹಾಗೂ 1989 ರಲ್ಲಿ ಚುನಾವಣೆಯಲ್ಲಿ ಸೋತಿದ್ದರು. ಈಗ ಜನ ಆಶೀರ್ವಾದ ಮಾಡಿ ಗೆಲುವು ಸಾಧಿಸಿ ಗೃಹ ಸಚಿವ ಸ್ಥಾನವನ್ನು ಅಲಂಕರಿಸಿದ್ದೀರಿ, ಈ ಅಧಿಕಾರ ಸಿಕ್ಕ ಅವಧಿಯಲ್ಲಿ ನೀವು ಕಾನೂನು ಸುವ್ಯವಸ್ಥೆ ಬಲಪಡಿಸಿ,  ಜನರಲ್ಲಿ ವಿಶ್ವಾಸ ತುಂಬಿ, ಸರ್ಕಾರಕ್ಕೆ ಶಕ್ತಿಯನ್ನು ನೀಡಬೇಕು. ಅದನ್ನು ಬಿಟ್ಟು ಪಿಎಸ್ಐ, ವರ್ಗಾವಣೆ ದಂಧೆ ಮಾಡುತ್ತಿದ್ದಾರೆ.

ಗೃಹ ಸಚಿವ ಸ್ಥಾನ ದುರ್ಬಳಕೆ, ಕೇಂದ್ರ ತನಿಖಾ ಸಂಸ್ಥೆಗಳ ಹೆಸರು ಬಳಸಿಕೊಂಡು ಕಾಂಗ್ರೆಸ್ ನಾಯಕರ ಹೆಸರಿಗೆ ಕಳಂಕ ತರಲು ಮುಂದಾಗಿದ್ದಾರೆ.

ಮುಖ್ಯಮಂತ್ರಿಗಳು ಅರಗ ಅವರನ್ನು ಸಂಪುಟದಿಂದ ಕೈ ಬಿಡದಿದ್ದರೆ ತೀರ್ಥಹಳ್ಳಿಯಿಂದಲೆ ಇವರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ಹೇಳುತ್ತೇನೆ.

ಇನ್ನು ಸಿ. ಟಿ ರವಿ ಅವರು ಕೂಡ ತಾನು ಸಂಘ ಪರಿವಾರದಿಂದ ಬಂದಿದ್ದು ಎಂದು ಹೇಳಿಕೊಳ್ಳುತ್ತಾರೆ. ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. ಆದರೆ ಅವರು ಚಿಕ್ಕಮಗಳೂರು ಪಂಚಾಯ್ತಿ ಮಟ್ಟದ ರಾಜಕಾರಣ ಮನಸ್ಥಿತಿಯಿಂದ ಹೊರ ಬಂದಿಲ್ಲ. ಅವರು ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ನಿಂದನೆ ಮಾಡುವುದನ್ನು ಪ್ರವೃತ್ತಿ ಮಾಡಿಕೊಂಡಿದ್ದಾರೆ. ನೆಹರೂ ಅವರಿಂದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರವರೆಗೂ ಹಲವು ರೀತಿಯ ನಿಂದನಾ ಹೇಳಿಕೆ ನೀಡಿದ್ದಾರೆ. ಇವುಗಳನ್ನು ರಾಜಕೀಯವಾಗಿ ಎದುರಿಸುವ ಸಾಮರ್ಥ್ಯ ನಮಗಿದೆ.

ಅವರು ಚಿಕ್ಕಮಗಳೂರಿನಲ್ಲಿ ಮಾಡಿರುವ ತಪ್ಪುಗಳನ್ನು ಬಹಿರಂಗ ಪಡಿಸಿದ ಲಕ್ಷ್ಮಣ ಅವರ ವಿರುದ್ಧ ನೊಟೀಸ್ ನೀಡಿದ್ದು, ಅದಕ್ಕೆ ನಾವು ಉತ್ತರವನ್ನು ಕೊಟ್ಟಿದ್ದೇವೆ. ಈಗ ಅವರು ಚಿಕ್ಕಮಗಳೂರಿನಲ್ಲಿ ನ್ಯಾಯಾಲಯಕ್ಕೆ ಹೋಗಿ ಅಲ್ಲಿನ ಮಾಧ್ಯಮಗಳ ಮುಂದೆ ನಾನು ಲಕ್ಷ್ಮಣ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Online Fraud: ಆನ್ಲೈನ್ ನಲ್ಲಿ ಟೀ ಶರ್ಟ್ ಬುಕ್ ಮಾಡಿದ್ದ ಮಹಿಳೆ ಕಳೆದುಕೊಂಡಿದ್ದು ಬರೋಬ್ಬರಿ 10 ಲಕ್ಷ ರೂ..!

ಸಿ. ಟಿ ರವಿ ಅವರು ಕಾಂಗ್ರೆಸ್ ನಾಯಕರ ಬಗ್ಗೆ ನೀಡಿರುವ ಹೇಳಿಕೆಗೆ ನಾವು ಕೂಡ ಅದೇ ಧಾಟಿಯಲ್ಲಿ ಉತ್ತರ ನೀಡಿದ್ದೇವೆ. ಅವರ ವಿರುದ್ಧ ಇರುವ ಹಲವು ಆರೋಪಗಳನ್ನು ದಾಖಲೆ ಸಮೇತ ಲಕ್ಷ್ಮಣ್ ಅವರು ಪ್ರಶ್ನೆ ಮಾಡಿದ್ದೇವೆ. ಲಕ್ಷ್ಮಣ್ ಅವರ ಆರೋಗ್ಯ ಸರಿ ಇಲ್ಲದ ಕಾರಣ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿಲ್ಲ. ಮುಂದಿನ ದಿನಗಳಲ್ಲಿ ಅವರು ಬಂದು ಮಾತನಾಡುತ್ತಾರೆ.

ಸಿ. ಟಿ ರವಿ ಅವರ ವಿರುದ್ಧವೂ ಮೈಸೂರಿನಲ್ಲಿ ಲಕ್ಷ್ಮಣ ಅವರು ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತಾರೆ. ರವಿ ಅವರು ಕಾನೂನು ಇಟ್ಟುಕೊಂಡು ಪಲಾಯನ ಮಾಡಬಾರದು. ದೇಶದಲ್ಲಿ ಮಾನನಷ್ಟ ಮೊಕದ್ದಮೆ ಅವಕಾಶವನ್ನು ಐಪಿಸಿ ಸೆಕ್ಷನ್ 499 ಹಾಗೂ 500ರಲ್ಲಿ ನೀಡಿದ್ದು ಕಾಂಗ್ರೆಸ್ ಪಕ್ಷ. ನೀವು ಕಾಂಗ್ರೆಸ್ ಗೆ ಇದರ ಬಗ್ಗೆ ಪಾಠ ಮಾಡಬೇಡಿ. ನಿಮ್ಮ ಕಾನೂನಾತ್ಮಕ ಕ್ರಿಯೆಗೆ ಅದರದೇ ರೀತಿ ಉತ್ತರ ನೀಡುತ್ತೇವೆ. ಸಾರ್ವಜನಿಕ ಟೀಕೆಗೆ ಅದರದೇ ರೀತಿ ಉತ್ತರ ನೀಡುತ್ತೇವೆ.  ರವಿ ಅವರ ವಿರುದ್ಧವೂ ಕಾಂಗ್ರೆಸ್ ಪಕ್ಷದ ಲಕ್ಷ್ಮಣ್ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಿದ್ದಾರೆ. ಯಾವ ಆಧಾರದ ಮೇಲೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ.

ರವಿ ಅವರ ಮಾನನಷ್ಟ ಮೊಕದ್ದಮೆ ಬೆದರಿಕೆಗೆ ನಾವು ಜಗ್ಗುವುದಿಲ್ಲ. ನಾವುಗಳು ನಿಮ್ಮ ಹಾಗೂ ನಿಮ್ಮ ಪಕ್ಷದ ಅಕ್ರಮದ ವಿರುದ್ಧ ಹೋರಾಟ ಮಾಡುತ್ತೇವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News