ಕಲಬುರಗಿ: ವಿಧಾನಸಭೆ ಚುನಾವಣೆಯ ಮತದಾನವು ಇದೇ ಮೇ 10 ರಂದು ಬೆಳಗಿನ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು, ಚುನಾವಣೆ ನಿಯಮದ ಪ್ರಕಾರ ಯಾವುದೇ ಪಕ್ಷದವರು ಹಾಗೂ ಅಭ್ಯರ್ಥಿಗಳು ಮತದಾರರನ್ನು ಕ್ಷೇತ್ರದ ಹೊರಗಿನಿಂದ ಅಥವಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ಮಾಡಲು ವಾಹನಗಳಲ್ಲಿ ಕರೆದುಕೊಂಡು ಬರುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Karnataka Election: ವಿಧಾನಸಭೆ ಚುನಾವಣೆ ಹಿನ್ನೆಲೆ ಮೆಟ್ರೋ ಸೇವೆ ವಿಸ್ತರಣೆ: ವಿವರ ಹೀಗಿದೆ ನೋಡಿ..


ಯಾವುದೇ ಮತದಾರರನ್ನು ಬಸ್ಸು ಅಥವಾ ಇತರೆ ವಾಹನಗಳಲ್ಲಿ ಕರೆದುಕೊಂಡು ಬರುವುದು ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ ಅನ್ವಯ ಶಿಕ್ಷಾರ್ಹ ಅಪರಾಧವಾಗಿದ್ದು, ಇದನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದವರ ವಿರುದ್ಧ ಕಾಯ್ದೆ ಅನುಸಾರ ಕಠಿಣ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.


ಮತದಾರರು ಯಾವುದೇ ಆಸೆ ಮತ್ತು ಆಮಿಷ, ಪ್ರಭಾವ, ಬೆದರಿಕೆಗೆ ಮಣಿಯದೇ ಸ್ವ-ಇಚ್ಛೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ಮನವಿ ಮಾಡಿದ್ದಾರೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.