Jagdish Shettar: ಮತ ಕ್ಷೇತ್ರಗಳಿಗೆ ಬಿಜೆಪಿ ಹಣ ಹಂಚಿರುವುದು ತುಂಬಾ ಅಸಹ್ಯಕರ-ಜಗದೀಶ್‌ ಶೆಟ್ಟರ್

 Karnataka Election: ಚುನಾವಣೆ ಮುಗಿದ ಬೆನ್ನಲೇ ಮಾಧ್ಯಮದ ಜೊತೆ ಮಾತನಾಡಿದ ಜಗದೀಶ್‌ ಶೆಟ್ಟರು, ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಹಣ ನೀಡಿದ್ದಾರೆಂದು ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

Written by - Zee Kannada News Desk | Last Updated : May 11, 2023, 12:50 PM IST
  • ಚುನಾವಣೆ ಮುಗಿದ ಬೆನ್ನಲೇ ಮಾಧ್ಯಮದ ಜೊತೆ ಮಾತನಾಡಿದ ಜಗದೀಶ್‌ ಶೆಟ್ಟರು
  • ರಾಜ್ಯ ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಜನರಿಗೆ ಬೇಸರ
  • ಯಾವ ಯೋಜನೆಗಳು ಜನರ ಪಾಲಗಲಿಲ್ಲ
Jagdish Shettar: ಮತ ಕ್ಷೇತ್ರಗಳಿಗೆ ಬಿಜೆಪಿ ಹಣ ಹಂಚಿರುವುದು ತುಂಬಾ ಅಸಹ್ಯಕರ-ಜಗದೀಶ್‌ ಶೆಟ್ಟರ್ title=

ಹುಬ್ಬಳ್ಳಿ: ಚುನಾವಣೆ ಮುಗಿದ ಬೆನ್ನಲೇ ಮಾಧ್ಯಮದ ಜೊತೆ ಮಾತನಾಡಿದ ಜಗದೀಶ್‌ ಶೆಟ್ಟರು, ಯಾವುದೂ ಸರಿಯಾಗಿ ಅನುಷ್ಠಾನಕ್ಕೆ ತರಲಿಲ್ಲ. ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಿ ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಿಲ್ಲಾ.

ಗಾರಿಕೆಗೆ ಎರಡು ಎಕರೆ ಜಮೀನು ಕೊಡಲು ಆಗಿಲ್ಲಾ. ವ್ಹೀಲ್ ಪವರ್ ಬೇಕು ಸಿಎಮ್‌ಗೆ. ಕೆಲಸ ಮಾಡಲು ಆಗದ ಸಿಎಂ ಯಾಕೇ ಇರಬೇಕು  ಎಂದು ಆಡಳಿತ ಸಿಎಂ ವಿರುದ್ಧ ಕಿಡಿಕಾರಿದ್ದಾರೆ.  

ಇದನ್ನೂ ಓದಿ: CM  Bommai: ಮತದಾನೋತ್ತರ ಸಮೀಕ್ಷೆ ಮೇಲೆ ನಂಬಿಕೆ ಇಲ್ಲ- ಸಿಎಂ ಬೊಮ್ಮಾಯಿ

ಡೇ ಟುಡೆ ರಾಜ್ಯ ಸರ್ಕಾರದ ಆಡಳಿತವನ್ನು ಜನರು ನೋಡುತ್ತಾರೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಜನರಿಗೆ ಬೇಸರ ಮೂಡಿಸಿದೆ. ಯೋಜನೆಗಳು ಜನರಿಗೆ ತಲುಪಲಿಲ್ಲ.‌

ಇನ್ನುಳಿದಂತೆ ಯೆ  ಮೀಸಲಾತಿ ಜನರಿಗೆ ತಲುಪಲಿಲ್ಲ ಮೀಸಲಾತಿ ಅನುಷ್ಠಾನ ಮಾಡಲ್ಲಾ ಅಂತಾ ಕೋರ್ಟ್‌ಗೆ ಹೇಳಿದ್ದಾರೆ. ಇಲ್ಲಿ ಜನರಿಗೆ ಮೋಸ ಮಾಡಿದರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಎಲ್ಲರೂ ತಪ್ಪದೇ ಮತ ಹಕ್ಕು ಚಲಾಯಿಸುವಂತೆ ಸುಧಾಮೂರ್ತಿ ಮನವಿ

ಈ ನಿಟ್ಟಿನಲ್ಲಿ ಚುನಾವಣೆ ಪ್ರಚಾರದ ವೇಳೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಹಣ, ಕುಕ್ಕರ್ ಕೊಡುತ್ತಾರೆ. ಆದರೆ ಬಿಜೆಪಿ ಹೆಸರು ಹೇಳಿಕೊಳ್ಳುವ ವ್ಯಕ್ತಿಗಳು ನಮ್ಮ ಕ್ಷೇತ್ರದಲ್ಲಿ ಹತಾಶರಾಗಿ ಹಣ ಹಂಚಿದ್ದಾರೆ.‌ ಸ್ಲಮ್‌ಗಳಲ್ಲಿ ಜನರಿಗೆ ಐದು‌ನೂರು, ಸಾವಿರ ಹಣ ಕೊಟ್ಟಿದ್ದಾರೆ.

ಹಣದ ಬಲದ ಮೇಲೆ ಗೆಲ್ಲುವುದಾದರೆ ಬಹಳಷ್ಟು ಶ್ರೀಮಂತರೇ ಗೆಲ್ಲುತ್ತಿದ್ದರು. ನಮ್ಮ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚುವುದು ಮಾಡಿದ್ದು ನನಗೆ ವೇದನೆಯಾಗಿದೆ ಎಂದಿದ್ದಾರೆ. ನಾನು ಲೆಕ್ಕಾಚಾರ ಮಾಡಿದ್ದಕ್ಕಿಂತ ದ್ವಿಗುಣ ಬೆಂಬಲ ಸಿಕ್ಕಿದೆ. ಗೆಲುವಿನ ಅಂತರ ಕಳೆದ ಬಾರಿಗಿಂತ ಹೆಚ್ಚಾಗಲಿದೆ.‌ನಾನು ಆರು ಎಲೆಕ್ಷನ್ ಮಾಡಿದ್ದೀನಿ, ಮತದಾರರಿಗೆ ದುಡ್ಡು ಹಂಚಿರಲಿಲ್ಲ ಎಂದು ಆಡಳಿತ ಪಕ್ಷದ ಬಗ್ಗೆ ಮಾತಾನಾಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News