ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ಕೇಳಲು ಎಚ್ ಡಿ ಕುಮಾರಸ್ವಾಮಿಗೆ ನೈತಿಕತೆ ಇಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಸ್ತೆ ಮಧ್ಯೆ ಕಂಬದಂತೆ ನೆಟ್ಟಗೆ ಎದ್ದು ನಿಂತ ನಾಗರಹಾವು: ಅಬ್ಬಬ್ಬಾ ಮೈಝುಂ ಎನಿಸೋ ವಿಡಿಯೋ ವೈರಲ್


ಸುದ್ಧಿಗಾರರ ಜತೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆ ಆಧಾರದ ಮೇಲೆ ಅಕ್ರಮ ನಡೆದಿರುವುದು ಸಾಬೀತು ನಂತರ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂ ಷನ್ʼಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಎಸ್ಐಟಿ ಮನವಿ ಮಾಡಿ ಹತ್ತು ತಿಂಗಳು ಕಳೆದಿದೆ. ನಿಜವಾಗಿಯೂ ರಾಜೀನಾಮೆ ನೀಡಬೇಕಿರುವುದು ಕುಮಾರಸ್ವಾಮಿ ಎಂದು ತಿಳಿಸಿದರು.


ಸಿದ್ದರಾಮಯ್ಯ ವಿರುದ್ಧ ನೀಡಿರುವುದು ಖಾಸಗಿ ದೂರು. ಎಫ್ಐಆರ್ ಆಗಿಲ್ಲ, ತನಿಖೆ ನಡೆದಿಲ್ಲ. ಆದರೆ ದೂರು ನೀಡಿದ ದಿನವೇ ನೋಟಿಸ್ ನೀಡಿರುವುದು ಎಷ್ಟು ಸರಿ. ತನಿಖೆಯಲ್ಲಿ ಅಕ್ರಮ ಸಾಬೀತು ಪ್ರಕರಣ ದಲ್ಲಿ ಕುಮಾರಸ್ವಾಮಿ ವಿರುದ್ಧ ಮೊದಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕಿತ್ತು. ನೈತಿಕತೆ ಹೊತ್ತು ಕುಮಾರಸ್ವಾಮಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.


ನೂರು ಸಿದ್ದರಾಮಯ್ಯ ಬಂದರೂ ಏನೂ ಮಾಡಲಾಗದು ಎಂದು ಕುಮಾರಸ್ವಾಮಿ ಹೇಳುತ್ತಾರೆ. ಅವರು ಒಬ್ಬ ಜಮೀರ್ ನನ್ನು ಫೇಸ್ ಮಾಡಲಿ ಸಾಕು ಎಂದು ಸವಾಲು ಹಾಕಿದರು.


ಇದನ್ನೂ ಓದಿ: BSNLನ ಈ  ಪ್ಲಾನ್ ಬಳಸಿದರೆ ವರ್ಷದವರೆಗೆ ರಿಚಾರ್ಜ್ ಮಾಡುವ ಅಗತ್ಯವೇ ಇಲ್ಲ ! ಡೈಲಿ ಡೇಟಾ, ಅನ್ಲಿಮಿಟೆಡ್ ಕಾಲ್ ಎಲ್ಲವೂ ಲಭ್ಯ  


ರಾಮನಗರದಲ್ಲಿ ಕುಮಾರಸ್ವಾಮಿ ನಾನು ಒಂದೇ ನಂಬರ್ ಪ್ಲೇಟ್‌ ಎರಡು ಬಸ್ ಗೆ ಹಾಕಿ ಓಡಿಸುತ್ತಿದ್ದೆ ಎಂದಿದ್ದಾರೆ. ಹಾಗಿದ್ದರೆ ನನ್ನ ನಿಮ್ಮ ಜತೆ ಹೇಗೆ ಇಟ್ಟುಕೊಡಿದ್ದಿರಿ ಎಂದು ಪ್ರಶ್ನೆ ಮಾಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews