ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸೆಪ್ಟೆಂಬರ್15 ರಂದು ಬೆಳಗಾವಿ ಪ್ರವಾಸ ಕೈಗೊಳ್ಳಲಿದ್ದು, ಅಂದು  ಸುವರ್ಣ ವಿಧಾನ ಸೌಧದಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಜನತಾದರ್ಶನ ನಡೆಸಲಿದ್ದಾರೆ.


COMMERCIAL BREAK
SCROLL TO CONTINUE READING

ಸೆಪ್ಟೆಂಬರ್15 ರಂದು ಬೆಳಿಗ್ಗೆ  ಬೆಳಗಾವಿಯಲ್ಲಿ ರಾಷ್ಟ್ರಪತಿಗಳೊಂದಿಗೆ ಕೆಎಲ್ಎಸ್ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 3.00 ಗಂಟೆಯಿಂದ 5.00 ಗಂಟೆವರೆಗೆ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು ಸ್ವೀಕರಿಸುವರು ಎನ್ನಲಾಗಿದೆ.