ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಭದ್ರಕೋಟೆ ಎನಿಸಿಕೊಂಡಿರುವ ಹಾಸನದಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ ರೂಪಿಸುತ್ತಿರುವ ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿತ್ತು. ಇದೀಗ ಮಾಜಿ ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌ ಅವರನ್ನು ಪಕ್ಷಕ್ಕೆ  ಸೆಳೆದು ಅವರಿಗೆ ಹಾಸನದಿಂದ ಟಿಕೆಟ್‌ ನೀಡಲು ಪಕ್ಷ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.


COMMERCIAL BREAK
SCROLL TO CONTINUE READING

ಮಾಜಿ ಭಾರತೀಯ ಕ್ರಿಕೆಟ್‌ ಆಟಗಾರ ಕರ್ನಾಟಕ ಜಾವಗಲ್ ಶ್ರೀನಾಥ್ ಅವರನ್ನು ಈಗಾಗಲೇ ಪಕ್ಷಕ್ಕೆ ಆಹ್ವಾನಿಸಲಾಗಿದೆ. ಸ್ವತಃ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೇ ಜಾವಗಲ್ ಶ್ರೀನಾಥ್ ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ.


ಆದರೆ ಈ ಬಗ್ಗೆ ಬಿಜೆಪಿ ಪಕ್ಷದಿಂದಾಗಲೀ ಅಥವಾ ಜಾವಗಲ್ ಶ್ರೀನಾಥ್ ಅವರಿಂದಾಗಲಿ ಯಾವುದೇ ಹೇಳಿಕೆ ನೀಡಿಲ್ಲ.