ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಒಂದು ಸ್ಥಾನ ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿ ಒಂದೇ ಒಂದು ಸ್ಥಾನ ಸಿಗಬಾರದು. ನಾವು ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಪಕ್ಷದಿಂದ ಈ ಬಾರಿ 28 ಸ್ಥಾನವನ್ನೂ ಗೆಲ್ಲುತ್ತೇವೆ. ಅಲ್ಲದೇ ಕಾಂಗ್ರೆಸ್‌ ಪಕ್ಷವನ್ನು ನಿರ್ಣಾಮ ಮಾಡುವ ದೃಷ್ಟಿಯಿಂದ ಒಂದಾಗಿದ್ದೇವೆ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಸುಕುಮಾರ ಶೆಟ್ಟಿ ಪಕ್ಷ ಬಿಟ್ಟ ಬಗ್ಗೆ
ಸೀಟು ಕೊಡಲಿಲ್ಲ ಅಂತ ಪಕ್ಷ ಬಿಟ್ಟು ಹೋದರು, ಪಕ್ಷ ಬಿಟ್ಟು ಹೋದ ಜಗದೀಶ್ ಶೆಟ್ಟರ್ ಏನಾಗಿದ್ದಾರೆ, ಬಕೆಟ್ ಹಿಡಿದುಕೊಂಡವರಿಗೆ ಪಕ್ಷದಲ್ಲಿ ಅವಕಾಶ ಎಂದು ಹೇಳಿದ್ದಾರೆ ಶೆಟ್ಟರ್ ಸಿಎಮ್ ಆಗಲು ಯಾವ ಬಕೆಟ್ ಹಿಡಿದ್ದಿದ್ದರು. ಸೀಟು ಕೊಟ್ಟರೆ ಪಕ್ಷ ಒಳ್ಳೆದು ಇಲ್ಲದಿದ್ದರೆ ಬಕೆಟ್ ಪಕ್ಷನಾ. ಬಿಜೆಪಿಯಲ್ಲಿ ಕೋಟ್ಯಂತರ ಕಾರ್ಯಕರ್ತರಿದ್ದಾರೆ ಎಲ್ಲರಿಗೂ ಟಿಕೆಟ್ ಕೊಡಲು ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ. 


ಇದನ್ನೂ ಓದಿ-ಮಂಡ್ಯದಲ್ಲಿ ಮುಂದುವರೆದ ಕಾವೇರಿ ಜಲ ಕಿಚ್ಚು


ರೈತರ ಆತ್ಮಹತ್ಯೆ ವಿಚಾರ
ರಾಜ್ಯದಲ್ಲಿ ಸರ್ಕಾರವೇ ಇಲ್ಲ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ಕೊಡಿ ಎಂದು ಕೇಳಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತರು ಬೇರೆ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಕೆಲವರು ಲವ್ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಒಬ್ಬ ಮಂತ್ರಿ ಹೇಳುವುದನ್ನು ನಾನು ಎಂದು ಕೇಳಿರಲಿಲ್ಲ. 


ರಾಜ್ಯದಲ್ಲಿ 139ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರದ ಯಾವ ಮಂತ್ರಿಕೂಡ ರಾಜ್ಯ ಪ್ರವಾಸ ಮಾಡುತ್ತಿಲ್ಲ ಯಾವ ಮಂತ್ರಿಯೂ ಸಹ ರೈತರ ಮನೆಗೆ ತೆರಳಿ ರೈತರ ಕಷ್ಟ ಕೇಳುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಪ್ರತಿ ಶಾಸಕ, ಮಂತ್ರಿ, ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿಗೆ ರೈತರ ಶಾಪ ತಟ್ಟುತ್ತೆ . ರಾಜ್ಯ ಸರ್ಕಾರ ತಕ್ಷಣ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ಕೊಡಬೇಕು ಎಂದು ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. 


ಇದನ್ನೂ ಓದಿ-ಇಂದಿನ ಹೆಡ್ಲೈನ್ಸ್ : ಈ ಕ್ಷಣದ ಪ್ರಮುಖ ಸುದ್ದಿಗಳು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.