HD Revanna: ಮತ್ತೊಂದು CD ಸ್ಫೋಟ: ಸದನದಲ್ಲಿ CD ತೋರಿಸಿದ ಎಚ್.ಡಿ.ರೇವಣ್ಣ!

ಇಂದು ಬಜೆಟ್ ಅಧಿವೇಶನದಲ್ಲಿ ಮತ್ತೊಂದು ಸಿ.ಡಿ. ಸ್ಫೋಟಕಗೊಂಡಿದ್ದು, ಮತ್ತೆ ರಾಜ್ಯ ರಾಜಕಾರಣದಲ್ಲಿ ಸಿ.ಡಿ. ಸಂಚಲನ ಮೂಡಿಸಿದೆ.

Last Updated : Mar 9, 2021, 07:29 PM IST
  • ರಾಜ್ಯ ರಾಜ್ಯಕಾರಣದಲ್ಲಿ ಸಿ.ಡಿ. ಭಾರೀ ಸದ್ದು ಮಾಡುತ್ತಿದೆ.
  • ಇಂದು ಬಜೆಟ್ ಅಧಿವೇಶನದಲ್ಲಿ ಮತ್ತೊಂದು ಸಿ.ಡಿ. ಸ್ಫೋಟಕಗೊಂಡಿದ್ದು, ಮತ್ತೆ ರಾಜ್ಯ ರಾಜಕಾರಣದಲ್ಲಿ ಸಿ.ಡಿ. ಸಂಚಲನ ಮೂಡಿಸಿದೆ.
  • ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಶ್ಲೀಲ ಸಿ.ಡಿ ಬಹಿರಂಗಗೊಂಡ ಬೆನ್ನಲ್ಲೇ ಮಿತ್ರಮಂಡಳಿಯ ಇತರ ಸಚಿವರಲ್ಲೂ ಆತಂಕ ಶುರುವಾಗಿದೆ.
HD Revanna: ಮತ್ತೊಂದು CD ಸ್ಫೋಟ: ಸದನದಲ್ಲಿ CD ತೋರಿಸಿದ ಎಚ್.ಡಿ.ರೇವಣ್ಣ! title=

ಬೆಂಗಳೂರು: ರಾಜ್ಯ ರಾಜ್ಯಕಾರಣದಲ್ಲಿ ಸಿ.ಡಿ. ಭಾರೀ ಸದ್ದು ಮಾಡುತ್ತಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಶ್ಲೀಲ ಸಿ.ಡಿ ಬಹಿರಂಗಗೊಂಡ ಬೆನ್ನಲ್ಲೇ ಮಿತ್ರಮಂಡಳಿಯ ಇತರ ಸಚಿವರಲ್ಲೂ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಕೋರ್ಟ್‌ ಮೊರೆ ಹೋಗಿದ್ದಾರೆ.

ಇದರ ಬೆನ್ನಲ್ಲೇ ಇಂದು ಬಜೆಟ್ ಅಧಿವೇಶನ(Budget Session)ದಲ್ಲಿ ಮತ್ತೊಂದು ಸಿ.ಡಿ. ಸ್ಫೋಟಕಗೊಂಡಿದ್ದು, ಮತ್ತೆ ರಾಜ್ಯ ರಾಜಕಾರಣದಲ್ಲಿ ಸಿ.ಡಿ. ಸಂಚಲನ ಮೂಡಿಸಿದೆ.

BJP: ಆಪರೇಷನ್ ಕಮಲ ಸಕ್ಸಸ್: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಸಂಸದ!

ಹಾಸನದ ಸಹಕಾರ ಇಲಾಖೆ ಹೆಚ್ಚುವರಿ ನೊಂದಣಾಧಿಕಾರಿ ನಾರಾಯಣ ಅವರು ಬೆದರಿಕೆ ಹಾಕಿದ ಧ್ವನಿ ಮುದ್ರಿತ ಸಿ.ಡಿಯನ್ನು ಜೆಡಿಎಸ್ ಶಾಸಕ ಸದನದಲ್ಲಿ ಪ್ರದರ್ಶನ ಮಾಡಿದರು. ಅಧಿಕಾರಿಗಳ ಮಾತುಗಳು ಇರುವ ರೆಕಾರ್ಡ್ ಇದೆ ಎಂದು ಎಚ್‌.ಡಿ.ರೇವಣ್ಣ(HD Revanna) ಅವರು ಸ್ಪೀಕರ್ ಮುಂದೆ ಸಿಡಿ ತೋರಿಸಿದರು.

Karnataka State: 'ಸರ್ಕಾರಿ ಮಹಿಳಾ ಉದ್ಯೋಗಿ'ಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌!

ಸಹಕಾರ ಇಲಾಖೆಯ ಅಧಿಕಾರಿಯೊಬ್ಬರು ಕುಡಿದು ಬೈತಾರೆ. ಕುಡಿದು ಏನೇನೋ ಬೈತಾರೆ. ದಲಿತ(Dalit) ಸಮುದಾಯದ ಯುವಕನೊಬ್ಬನಿಗೆ ಆ ಅಧಿಕಾರಿ ಗನ್‌ನಿಂದ ಗುಂಡು ಹೊಡೀತಿನಿ ಅಂತ ಬೆದರಿಸಿದ್ದಾರೆ. ಒಂದು ಗುಂಡು ನಿನಗೆ ಹೊಡೀತೀನಿ, ಇನ್ನೊಂದು ಗುಂಡು ಯಾರಿಗೆ ಹೊಡೀಲಿ ಅಂತಾನೆ ಆ ಅಧಿಕಾರಿ. ನಮಗೂ ಗೌರವ ಕೊಡಲ್ಲ ಎಂದು ರೇವಣ್ಣ ಅಳಲು ತೋಡಿಕೊಂಡರು.

7th Pay Commission: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:'3 ಕಂತುʼಗಳಲ್ಲಿ DA ಜುಲೈನಿಂದ ಬಿಡುಗಡೆ!

ಆ ಅಧಿಕಾರಿಗೆ ಶಾಸಕರೊಬ್ಬರ ಬೆಂಬಲ ಇದೆ. ಆದ್ರೆ, ಆ ಶಾಸಕರ ಹೆಸರು ಹೇಳಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಶಾಸಕ ಪ್ರೀತಂಗೌಡ(Preetam Gwda) ಹೆಸರು ಹೇಳದೆ ಆರೋಪ ಮಾಡಿದ್ದು, ಕೂಡಲೇ ಆ ಅಧಿಕಾರಿಯನ್ನು ಸಸ್ಪೆಂಡ್ ಮಾಡಬೇಕೆಂದು ಸದನದಲ್ಲಿ ಆಗ್ರಹಿಸಿದರು.

HD Kumaraswamy: 'ಪಾಪ  ರಮೇಶ್ ಜಾರಕಿಹೊಳಿ ಅಮಾಯಕ, ರಾಜಕಾರಣಕ್ಕಾಗಿ ಈ ಮಟ್ಟಕ್ಕೆ ಇಳಿಯಬಾರದು'

ರೇವಣ್ಣ ಆರೋಪಕ್ಕೆ ದನಿಗೂಡಿಸಿ ಬೆಂಬಲ ಸೂಚಿಸಿದ ಶಿವಲಿಂಗೇಗೌಡ, ಒಬ್ಬ ಶಾಸಕರು ಬೆದರಿಕೆ ಹಾಕಿದಾರೆ. ಆ ಅಧಿಕಾರಿ ವಿರುದ್ಧ ಎರಡು ಎಫ್ಐಆರ್(FIR) ಆಗಿದೆ. ಆದ್ದರಿಂದ ಸಸ್ಪೆಂಡ್ ಮಾಡಿ ಎಂದು ಒತ್ತಾಯಿಸಿದರು.

CD case : ಅಪರಾಧಿ ನಾನಲ್ಲ..! ಅಪರಾಧ ಎಸಗಿಲ್ಲ.!ಸ್ಫೋಟಕ ಮಾಹಿತಿ ನೀಡಿದ ಜಾರಕಿಹೊಳಿ

ಈ ವೇಳೆ ಪ್ರೀತಂಗೌಡಗೆ ಆ ಅಧಿಕಾರಿ ಆಪ್ತ ಅಂತ ಶಿವಲಿಂಗೇಗೌಡ ಕಾಲೆಳೆದರು. ಶಿವಲಿಂಗೇಗೌಡ ಮಾತಿಗೆ ಸಿಟ್ಟಾದ ಶಾಸಕ(MLA) ಪ್ರೀತಂ ಗೌಡ, ನನ್ನನ್ನು ಯಾಕೆ ಎಳೀತೀರಿ? ಆ ಸಿಡಿಯ‌ ಅಸಲಿಯತ್ತು ಬಗ್ಗೆಯೂ ಕೇಳಿ ಎಂದರು. ಬಳಿಕ ಶಿವಲಿಂಗೇಗೌಡ, ರೇವಣ್ಣ ಹಾಗೂ ಪ್ರೀತಂಗೌಡ ಮಧ್ಯೆ ವಾಕ್ಸಮರ ನಡೆಯಿತು.

ನೇರ ಪೊಲೀಸ್ ಮಹಾನಿರ್ದೇಶಕರ ನಿವಾಸಕ್ಕೆ ನುಗ್ಗಿದ ಬಸ್..! ಕಾರಣ..?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News