ಮೈಸೂರು:  ಹಾಸನದಲ್ಲಿ ಜೆಡಿಎಸ್ ಬೇರು ಅಭದ್ರವಾಗಿದೆ. ಅದಕ್ಕಾಗಿಯೇ ಬಿಜೆಪಿ ಶಾಸಕನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ದಾಳಿ ನಡೆಸಿದ್ದನ್ನು ವಿರೋಧಿಸಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೆಜೆಪಿ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಪ್ರೀತಂ ಗೌಡ ಮೆಲಿನ ದಾಳಿ ವ್ಯವಸ್ಥಿತ ಪಿತೂರಿ, ಅವರನ್ನು ರಾಜಕಿಯವಾಗಷ್ಟೇ ಅಲ್ಲ, ದೈಹಿಕವಾಗಿಯೂ ಮುಗಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದರು.


ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿಯೇ ಜನತೆ ಜೆಡಿಎಸ್ ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿಕೊಂಡಿರುವುದರಿಂದ ಜನತೆ ಜೆಡಿಎಸ್ ಅನ್ನು ದೂರ ಇಟ್ಟಿದ್ದಾರೆ. ಹೀಗಿರುವಾಗ ನಾವು ಸರ್ಕಾರ ರಚಿಸಲು ಪ್ರಯತ್ನ ಮಾಡುವುದರಲ್ಲಿ ತಪ್ಪೇನಿದೆ. ಇದೇ ಕಾರಣ ಮುಂದಿಟ್ಟುಕೊಂಡು ಓರ್ವ ಶಾಸಕರ ಮೇಲೆ ದಾಳಿ ನಡೆಸುವುದು ಸರಿಯಲ್ಲ ಎಂದು ಪ್ರತಾಪ್ ಸಿಂಹ ಕಿಡಿ ಕಾರಿದರು.