ಕಲಬುರಗಿ: ಮೊಹರಂ ಹಬ್ಬದ ವೇಳೆ ಕಲ್ಲು ತೂರಾಟ ನಡೆದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಇಂಗಳಗಿ ಗ್ರಾಮದ ಹೊನಗುಂಟಾ ಮತ್ತು ಗೋಟಾಳ್ ಕುಟುಂಬಗಳ ನಡುವೆ ಪರಸ್ಪರ ಕಲ್ಲು ತೂರಾಟ ನಡೆದಿದ್ದು, ಎರಡು ಕುಟುಂಬಗಳು ಒಂದೇ ಜಾತಿಗೆ ಸೇರಿದವರಾಗಿದ್ದು ಕಳೆದ ಎರಡು ವರ್ಷಗಳಿಂದ ಪ್ರೇಮ ವಿವಾಹದ ವಿಚಾರವಾಗಿ ದ್ವೇಷ ಉಂಟಾಗಿತ್ತು ಎನ್ನಲಾಗಿದೆ.


ಇದನ್ನೂ ಓದಿ: ಸೀಬೆ ಹಣ್ಣಿನ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜಗಳಿವೆ ಗೊತ್ತಾ..?


ನಿನ್ನೆ ಸಂಜೆ ಗ್ರಾಮಸ್ಥರು ಮೊಹರಂ ಹಬ್ಬವನ್ನು ಆಚರಿಸುತ್ತಿದ್ದ ಸಂದರ್ಭದಲ್ಲಿ ಎರಡು ಕುಟುಂಬಗಳ ನಡುವೆ ಕಲ್ಲು ತೂರಾಟ ನಡೆದಿದೆ.ಈ ಘಟನೆಯ ವೇಳೆ ಎರಡು ಕುಟುಂಬದ ಎಂಟು ಜನರಿಗೆ ಗಾಯವಾಗಿದೆ, ಅವರನ್ನು ಈಗ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಈಗ ಘಟನೆಗೆ ಸಂಬಂಧಿಸಿದಂತೆ ವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.