ಬೆಂಗಳೂರು: ತಮಿಳಿನ ಖ್ಯಾತ ನಟ ಹಾಗೂ ತಮಿಳುನಾಡಿನಲ್ಲಿ ಮಕ್ಕಳ್ ನೀಧಿ ಮಯಾಮ್ ಪಕ್ಷವನ್ನು ಸ್ಥಾಪಿಸಿರುವ ಕಮಲ್ ಹಾಸನ್ ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿ ಆಗಲಿದ್ದಾರೆ. ಕಮಲ್ ಹಾಸನ್ ರಾಜಕೀಯ ರಂಗಕ್ಕೆ ಕಾಲಿಟ್ಟು ಪಕ್ಷ ಸಂಘಟನೆಯಯಲ್ಲಿ ತೊಡಗಿಕೊಂಡಿರುವುದರಿಂದ ಈ ಭೇಟಿ ಮಹತ್ವ ಪಡೆದಿದೆ.


COMMERCIAL BREAK
SCROLL TO CONTINUE READING

ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಬೆಳಿಗ್ಗೆ 11:30 ಕ್ಕೆ ಸಿಎಂ‌ ಹಾಗೂ ಕಮಲಹಾಸನ್ ಭೇಟಿಗೆ ಸಮಯ ನಿಗದಿಯಾಗಿದೆ. ಭೇಟಿ ಸಂದರ್ಭದಲ್ಲಿ ಕಾವೇರಿ ಪ್ರಾಧಿಕಾರ ರಚನೆ ವಿಚಾರ, ಕಾವೇರಿ ನೀರು ಹಂಚಿಕೆ, ರಾಜ್ಯದಲ್ಲಿ ತಮಿಳು ಸಿನಿಮಾ ಬಿಡುಗಡೆ, ತಮಿಳುನಾಡು- ಕರ್ನಾಟಕ ಸೌಹಾರ್ದ ಸಂಬಂಧ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನದೆಸುವ ಸಾಧ್ಯತೆ ಇದೆ. ಈ ಸಂಬಂಧ ಅವರು ಕುಮಾರಸ್ವಾಮಿ ಅವರೊಂದಿಗಿನ ಭೇಟಿ ವೇಳೆ ಸಲಹೆಗಳನ್ನು ಪಡೆದುಕೊಳ್ಳಲಿದ್ದಾರೆ. ಜತೆಗೆ ರಾಜಕೀಯ ಬೆಳವಣಿಗೆಗೆ ಅಗತ್ಯ ಸಹಕಾರ ನೀಡುವಂತೆ ಕೋರಲಿದ್ದಾರೆ.