"ಕನ್ನಡ ಕಲಿಯೋ ಅವಶ್ಯಕತೆ ಇಲ್ಲ" ಅಂತ ಬೆಂಗಳೂರಿನಿಂದ ಪುಣೆಗೆ ಕಚೇರಿ ಸ್ಥಳಾಂತರಕ್ಕೆ ಮುಂದಾದ ಖ್ಯಾತ ಉದ್ಯಮಿ..!

ರಾಜಧಾನಿಯಲ್ಲಿ ಪರ ಭಾಷಿಗರ ಹಾವಳಿ ಹೆಚ್ಚಾಗುತ್ತಿದೆ. ಮೂಲ ಕನ್ನಡಿಗರ ಮೇಲೆ ಭಾಷೆಯ ವಿಷಯದಲ್ಲಿ ದಬ್ಬಾಳಿಕೆ ನಡೆಯುತ್ತಿದೆ. ಅಲ್ಲದೆ, ಬೇರೆ ರಾಜ್ಯಗಳಿಂದ ಉದ್ಯೋಗ ಅರಸಿ ಬಂದು, ಕನ್ನಡ ಮಾತನಾಡಲು ಹಿಂದೇಟು ಹಾಕುತ್ತಿದ್ದಾರೆ. ಇದೀಗ ಕನ್ನಡ ಕಲಿಯುತ್ತೇವೆ ಎನ್ನುವ ಬದಲು ಉದ್ಯಮಿಯೊಬ್ಬರು ತಮ್ಮ ಕಚೇರಿ ಸ್ಥಳಾಂತರಿಸಲು ಮುಂದಾಗಿದ್ದಾರೆ. 

Written by - Krishna N K | Last Updated : May 23, 2025, 03:41 PM IST
    • ರಾಜಧಾನಿಯಲ್ಲಿ ಪರ ಭಾಷಿಗರ ಹಾವಳಿ ಹೆಚ್ಚಾಗುತ್ತಿದೆ.
    • ಉದ್ಯಮಿಯೊಬ್ಬರು ಬೆಂಗಳೂರಿನಿಂದ ಪುಣೆಗೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ.
    • ಕನ್ನಡ ಮಾತನಾಡದ ನನ್ನ ಸಿಬ್ಬಂದಿ 'ಬಲಿಪಶು' ಆಗುವುದನ್ನ ನಾನು ಬಯಸುವುದಿಲ್ಲ"
"ಕನ್ನಡ ಕಲಿಯೋ ಅವಶ್ಯಕತೆ ಇಲ್ಲ" ಅಂತ ಬೆಂಗಳೂರಿನಿಂದ ಪುಣೆಗೆ ಕಚೇರಿ ಸ್ಥಳಾಂತರಕ್ಕೆ ಮುಂದಾದ ಖ್ಯಾತ ಉದ್ಯಮಿ..!

ಬೆಂಗಳೂರು : ಐಟಿ ಕಂಪನಿ ಸಂಸ್ಥಾಪಕರೊಬ್ಬರು ತಮ್ಮ ಕಚೇರಿಯನ್ನು 6 ತಿಂಗಳೊಳಗೆ ಬೆಂಗಳೂರಿನಿಂದ ಪುಣೆಗೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ. ಇದಕ್ಕೆ ಅವರು "ಭಾಷಾ ಅಸಂಬದ್ಧತೆ"ಯ ಅಂತ ಕಾರಣ ನೀಡಿದ್ದಾರೆ. ಅಲ್ಲದೆ, ತಮ್ಮ ಉದ್ಯೋಗಿಗಳನ್ನು ಕನ್ನಡಕ್ಕೆ ಬಲಿ ಪಶುಗಳಾಗುವುದು ಬೇಡ ಅಂತ ಹೇಳಿಕೊಂಡಿಕೊಂಡಿದ್ದಾರೆ..

Add Zee News as a Preferred Source

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಉದ್ಯಮಿ ಕೌಶಿಕ್‌, "ಈ ಭಾಷಾ ಅಸಂಬದ್ಧತೆಯಿಂದ, ನನ್ನ ಕನ್ನಡ ಮಾತನಾಡದ ಸಿಬ್ಬಂದಿ ಮುಂದೆ 'ಬಲಿಪಶು'ಗಳಾಗುವುದನ್ನು ನಾನು ಬಯಸುವುದಿಲ್ಲ" ಎಂದು ಬರೆದಿದ್ದಾರೆ. ತಮ್ಮ ಉದ್ಯೋಗಿಗಳ ಕಳವಳದಿಂದ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ

ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಚಂದಾಪುರದ ಎಸ್‌ಬಿಐ ಬ್ಯಾಂಕ್‌ ಶಾಖೆಯ ಮ್ಯಾನೇಜರ್ ಗ್ರಾಹಕರೊಂದಿಗೆ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ್ದರು. ಅಲ್ಲದೆ, ಇದು ಭಾರತ, ನಾನು ಹಿಂದಿ ಮಾತನಾಡುತ್ತೇನೆ, ಕನ್ನಡವನ್ನಲ್ಲ ಎಂದು ದರ್ಪ ಮೆರೆದಿದ್ದರು. ಈ ಸಂವಾದದ ವಿಡಿಯೋ ವೈರಲ್ ಆಗಿತ್ತು. ಕನ್ನಡಪರ ಸಂಘಟನೆಗಳು ಮತ್ತು ರಾಜಕೀಯ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಯಿತು.

ಅಲ್ಲದೆ, ಈ ಘಟನೆ ಕುರಿತು ಸಂಸದ ತೇಜಸ್ವಿ ಸೂರ್ಯ, ವೀಡಿಯೊ ಹಂಚಿಕೊಂಡು ವ್ಯವಸ್ಥಾಪಕರ ನಡವಳಿಕೆಯನ್ನು "ಸ್ವೀಕಾರಾರ್ಹವಲ್ಲ" ಎಂದು ಪ್ರತಿಕ್ರಿಯೆ ನೀಡಿದ್ದರು. ಇದೀಗ ಉದ್ಯಮಿ ಕೌಶಿಕ್ ಮುಖರ್ಜಿ ಅವರ ಪೋಸ್ಟ್ ಅನ್ನು ಹಂಚಿಕೊಂಡು ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.

ಇದನ್ನೂ ಓದಿ:ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಶಂಕಿತನ ಬಂಧನ

ಇನ್ನು ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್‌ ಖಾತೆಯಲ್ಲಿ, ನೀವು ಕರ್ನಾಟಕದಲ್ಲಿ, ವಿಶೇಷವಾಗಿ ಬ್ಯಾಂಕಿಂಗ್‌ ವಲಯದಲ್ಲಿ ಕೆಲಸ ಮಾಡುತ್ತಿದ್ದರೆ, ಗ್ರಾಹಕರಿಗೆ ಗೊತ್ತಿರುವ ಭಾಷೆಯಲ್ಲಿ ಸಂವಹನ ನಡೆಸುವುದು ಮುಖ್ಯ" ಎಂದು ಬರೆದುಕೊಂಡಿದ್ದರು. ಅಲ್ಲದೆ, ರಾಜ್ಯದ ಬ್ಯಾಂಕುಗಳು ಮತ್ತು ಇತರ ಸಾರ್ವಜನಿಕ ಸಂಪರ್ಕ ಸಂಸ್ಥೆಗಳಲ್ಲಿ, ಸ್ಥಳೀಯ ಭಾಷಿಗ ಸಿಬ್ಬಂದಿಯನ್ನು ನೇಮಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂಬ ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಎಸ್‌ಬಿಐ ಉದ್ಯೋಗಿ ನಡವಳಿಕೆಯನ್ನು ಟೀಕಿಸಿ, ಬಲವಾಗಿ ಖಂಡಿಸಿದ್ದರು. ಅಲ್ಲದೆ, ಕೇಂದ್ರ ಹಣಕಾಸು ಸಚಿವಾಲಯವು ಬ್ಯಾಂಕಿಂಗ್ ಸಿಬ್ಬಂದಿಗೆ ದೇಶಾದ್ಯಂತ ಸಾಂಸ್ಕೃತಿಕ ಮತ್ತು ಭಾಷಾ ಸೂಕ್ಷ್ಮತೆಯ ತರಬೇತಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿದರು.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News